Dharwad: ಶ್ರೀರಾಮಸೇನೆ ಕಾರ್ಯಕರ್ತರಿಂದ ದೇವಸ್ಥಾನದ ಬಳಿಯಿದ್ದ ಮುಸ್ಲಿಂ ಅಂಗಡಿಗಳು ಧ್ವಂಸ

Dharwad: ಶ್ರೀರಾಮಸೇನೆ ಕಾರ್ಯಕರ್ತರಿಂದ ದೇವಸ್ಥಾನದ ಬಳಿಯಿದ್ದ ಮುಸ್ಲಿಂ ಅಂಗಡಿಗಳು ಧ್ವಂಸ

Published : Apr 10, 2022, 11:35 AM ISTUpdated : Apr 10, 2022, 11:48 AM IST

ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ಹನುಮಂತನ ದೇವಸ್ಥಾನದ ಆವರಣದಲ್ಲಿನ ನಾಲ್ಕು ಮುಸ್ಲಿಂ ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಕ್ಷಕಶಃ ಧ್ವಂಸ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
 

ಧಾರವಾಡ (ಏ. 10): ದೇವಸ್ಥಾನದ ಆವರಣದಲ್ಲಿರುವ ಹಿಂದೂಯೇತರ ಅಂಗಡಿಗಳನ್ನು ತೆರವುಗೊಳಿಸುವ ಅಭಿಯಾನ ಇದೀಗ ಧಾರವಾಡದಲ್ಲಿ ತೀವ್ರ ಬಿಸಿ ಪಡೆದುಕೊಂಡಿದ್ದು, ಇಲ್ಲಿಯ ಪ್ರತಿಷ್ಠಿತ ನುಗ್ಗಿಕೇರಿ ಹನುಮಂತನ ದೇವಸ್ಥಾನದ ಆವರಣದಲ್ಲಿನ ನಾಲ್ಕು ಮುಸ್ಲಿಂ ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಕ್ಷಕಶಃ ಧ್ವಂಸ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ನಾಲ್ಕು ಅಂಗಡಿಗಳನ್ನು ತೆರವುಗೊಳಿಸಿರುವ ಶ್ರೀರಾಮ ಸೇನೆ ಕಾರ‍್ಯಕರ್ತರು ಈ ಮೂಲಕ ಕಾನೂನು ಕೈಗೆತ್ತಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿಂದ ರಾಜ್ಯದ ಹಲವೆಡೆ ದೇವಸ್ಥಾನದ ಆವರಣದಲ್ಲಿ ಇರುವ ಹಿಂದೂಯೇತರ ಅಂಗಡಿಗಳಿಗೆ ತೆರವುಗೊಳಿಸುವ ಚರ್ಚೆ ನಡೆಯುತ್ತಲೇ ಇದೆ. ಮನವಿ ಕೊಡುವುದು, ಒತ್ತಾಯಿಸುವುದು, ಪ್ರತಿಭಟನೆ ಅಷ್ಟಕ್ಕೇ ಈ ಅಭಿಯಾನ ಇಲ್ಲಿಯ ವರೆಗೆ ಸೀಮಿತವಾಗಿತ್ತು. ಇದೀಗ ಧಾರವಾಡದ ನುಗ್ಗಿಕೇರಿಯಲ್ಲಿ ಅಂಗಡಿಗಳನ್ನು ಎತ್ತಿ ಹಾಕಲಾಗಿದ್ದು, ಅದರಲ್ಲಿದ್ದ ಸಾಮಗ್ರಿಗಳನ್ನು ಬಿಸಾಡಿ ನಾಶಪಡಿಸಲಾಗಿದೆ.

ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ನಾಲ್ಕು ಹಿಂದೂಯೇತರ ಅಂಗಡಿಗಳಿದ್ದವು. ಕಳೆದ ವಾರವಷ್ಟೇ ಶ್ರೀರಾಮ ಸೇನೆಯ ಕಾರ್ಯಕರ್ತರು ಬಂದು ಪ್ರತಿಭಟನೆ ಮಾಡಿದ್ದರು. ಈ ದೇವಸ್ಥಾನದಲ್ಲಿನ ಹಿಂದೂಯೇತರ ಅಂಗಡಿಗಳನ್ನು ತೆರವು ಮಾಡಿ, ಇಲ್ಲದೇ ಹೋದಲ್ಲಿ ನಾವೇ ತೆರವುಗೊಳಿಸುತ್ತೇವೆ ಎಂದು ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದ ಶ್ರೀರಾಮ ಸೇನೆ ಕಾರ‍್ಯಕರ್ತರು ಒಂದೇ ವಾರದಲ್ಲಿ ಮುಸ್ಲಿಂ ಸಮುದಾಯದ ಎರಡು ತೆಂಗಿನಕಾಯಿ ಹಾಗೂ ಎರಡು ಜ್ಯೂಸ್‌ ಅಂಗಡಿಗಳನ್ನು ಸ್ವತಃ ಹಣ್ಣು-ತೆಂಗಿನಕಾಯಿಗಳನ್ನು ಹೊರಗೆ ಚೆಲ್ಲುವ ಮೂಲಕ ತೆರವುಗೊಳಿಸಿದ್ದಾರೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more