Dharwad: ಶ್ರೀರಾಮಸೇನೆ ಕಾರ್ಯಕರ್ತರಿಂದ ದೇವಸ್ಥಾನದ ಬಳಿಯಿದ್ದ ಮುಸ್ಲಿಂ ಅಂಗಡಿಗಳು ಧ್ವಂಸ

Dharwad: ಶ್ರೀರಾಮಸೇನೆ ಕಾರ್ಯಕರ್ತರಿಂದ ದೇವಸ್ಥಾನದ ಬಳಿಯಿದ್ದ ಮುಸ್ಲಿಂ ಅಂಗಡಿಗಳು ಧ್ವಂಸ

Published : Apr 10, 2022, 11:35 AM ISTUpdated : Apr 10, 2022, 11:48 AM IST

ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ಹನುಮಂತನ ದೇವಸ್ಥಾನದ ಆವರಣದಲ್ಲಿನ ನಾಲ್ಕು ಮುಸ್ಲಿಂ ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಕ್ಷಕಶಃ ಧ್ವಂಸ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
 

ಧಾರವಾಡ (ಏ. 10): ದೇವಸ್ಥಾನದ ಆವರಣದಲ್ಲಿರುವ ಹಿಂದೂಯೇತರ ಅಂಗಡಿಗಳನ್ನು ತೆರವುಗೊಳಿಸುವ ಅಭಿಯಾನ ಇದೀಗ ಧಾರವಾಡದಲ್ಲಿ ತೀವ್ರ ಬಿಸಿ ಪಡೆದುಕೊಂಡಿದ್ದು, ಇಲ್ಲಿಯ ಪ್ರತಿಷ್ಠಿತ ನುಗ್ಗಿಕೇರಿ ಹನುಮಂತನ ದೇವಸ್ಥಾನದ ಆವರಣದಲ್ಲಿನ ನಾಲ್ಕು ಮುಸ್ಲಿಂ ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಕ್ಷಕಶಃ ಧ್ವಂಸ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ನಾಲ್ಕು ಅಂಗಡಿಗಳನ್ನು ತೆರವುಗೊಳಿಸಿರುವ ಶ್ರೀರಾಮ ಸೇನೆ ಕಾರ‍್ಯಕರ್ತರು ಈ ಮೂಲಕ ಕಾನೂನು ಕೈಗೆತ್ತಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿಂದ ರಾಜ್ಯದ ಹಲವೆಡೆ ದೇವಸ್ಥಾನದ ಆವರಣದಲ್ಲಿ ಇರುವ ಹಿಂದೂಯೇತರ ಅಂಗಡಿಗಳಿಗೆ ತೆರವುಗೊಳಿಸುವ ಚರ್ಚೆ ನಡೆಯುತ್ತಲೇ ಇದೆ. ಮನವಿ ಕೊಡುವುದು, ಒತ್ತಾಯಿಸುವುದು, ಪ್ರತಿಭಟನೆ ಅಷ್ಟಕ್ಕೇ ಈ ಅಭಿಯಾನ ಇಲ್ಲಿಯ ವರೆಗೆ ಸೀಮಿತವಾಗಿತ್ತು. ಇದೀಗ ಧಾರವಾಡದ ನುಗ್ಗಿಕೇರಿಯಲ್ಲಿ ಅಂಗಡಿಗಳನ್ನು ಎತ್ತಿ ಹಾಕಲಾಗಿದ್ದು, ಅದರಲ್ಲಿದ್ದ ಸಾಮಗ್ರಿಗಳನ್ನು ಬಿಸಾಡಿ ನಾಶಪಡಿಸಲಾಗಿದೆ.

ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ನಾಲ್ಕು ಹಿಂದೂಯೇತರ ಅಂಗಡಿಗಳಿದ್ದವು. ಕಳೆದ ವಾರವಷ್ಟೇ ಶ್ರೀರಾಮ ಸೇನೆಯ ಕಾರ್ಯಕರ್ತರು ಬಂದು ಪ್ರತಿಭಟನೆ ಮಾಡಿದ್ದರು. ಈ ದೇವಸ್ಥಾನದಲ್ಲಿನ ಹಿಂದೂಯೇತರ ಅಂಗಡಿಗಳನ್ನು ತೆರವು ಮಾಡಿ, ಇಲ್ಲದೇ ಹೋದಲ್ಲಿ ನಾವೇ ತೆರವುಗೊಳಿಸುತ್ತೇವೆ ಎಂದು ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದ ಶ್ರೀರಾಮ ಸೇನೆ ಕಾರ‍್ಯಕರ್ತರು ಒಂದೇ ವಾರದಲ್ಲಿ ಮುಸ್ಲಿಂ ಸಮುದಾಯದ ಎರಡು ತೆಂಗಿನಕಾಯಿ ಹಾಗೂ ಎರಡು ಜ್ಯೂಸ್‌ ಅಂಗಡಿಗಳನ್ನು ಸ್ವತಃ ಹಣ್ಣು-ತೆಂಗಿನಕಾಯಿಗಳನ್ನು ಹೊರಗೆ ಚೆಲ್ಲುವ ಮೂಲಕ ತೆರವುಗೊಳಿಸಿದ್ದಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more