Dharwad: ಶ್ರೀರಾಮಸೇನೆ ಕಾರ್ಯಕರ್ತರಿಂದ ದೇವಸ್ಥಾನದ ಬಳಿಯಿದ್ದ ಮುಸ್ಲಿಂ ಅಂಗಡಿಗಳು ಧ್ವಂಸ

Dharwad: ಶ್ರೀರಾಮಸೇನೆ ಕಾರ್ಯಕರ್ತರಿಂದ ದೇವಸ್ಥಾನದ ಬಳಿಯಿದ್ದ ಮುಸ್ಲಿಂ ಅಂಗಡಿಗಳು ಧ್ವಂಸ

Published : Apr 10, 2022, 11:35 AM ISTUpdated : Apr 10, 2022, 11:48 AM IST

ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ಹನುಮಂತನ ದೇವಸ್ಥಾನದ ಆವರಣದಲ್ಲಿನ ನಾಲ್ಕು ಮುಸ್ಲಿಂ ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಕ್ಷಕಶಃ ಧ್ವಂಸ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
 

ಧಾರವಾಡ (ಏ. 10): ದೇವಸ್ಥಾನದ ಆವರಣದಲ್ಲಿರುವ ಹಿಂದೂಯೇತರ ಅಂಗಡಿಗಳನ್ನು ತೆರವುಗೊಳಿಸುವ ಅಭಿಯಾನ ಇದೀಗ ಧಾರವಾಡದಲ್ಲಿ ತೀವ್ರ ಬಿಸಿ ಪಡೆದುಕೊಂಡಿದ್ದು, ಇಲ್ಲಿಯ ಪ್ರತಿಷ್ಠಿತ ನುಗ್ಗಿಕೇರಿ ಹನುಮಂತನ ದೇವಸ್ಥಾನದ ಆವರಣದಲ್ಲಿನ ನಾಲ್ಕು ಮುಸ್ಲಿಂ ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಕ್ಷಕಶಃ ಧ್ವಂಸ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ನಾಲ್ಕು ಅಂಗಡಿಗಳನ್ನು ತೆರವುಗೊಳಿಸಿರುವ ಶ್ರೀರಾಮ ಸೇನೆ ಕಾರ‍್ಯಕರ್ತರು ಈ ಮೂಲಕ ಕಾನೂನು ಕೈಗೆತ್ತಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿಂದ ರಾಜ್ಯದ ಹಲವೆಡೆ ದೇವಸ್ಥಾನದ ಆವರಣದಲ್ಲಿ ಇರುವ ಹಿಂದೂಯೇತರ ಅಂಗಡಿಗಳಿಗೆ ತೆರವುಗೊಳಿಸುವ ಚರ್ಚೆ ನಡೆಯುತ್ತಲೇ ಇದೆ. ಮನವಿ ಕೊಡುವುದು, ಒತ್ತಾಯಿಸುವುದು, ಪ್ರತಿಭಟನೆ ಅಷ್ಟಕ್ಕೇ ಈ ಅಭಿಯಾನ ಇಲ್ಲಿಯ ವರೆಗೆ ಸೀಮಿತವಾಗಿತ್ತು. ಇದೀಗ ಧಾರವಾಡದ ನುಗ್ಗಿಕೇರಿಯಲ್ಲಿ ಅಂಗಡಿಗಳನ್ನು ಎತ್ತಿ ಹಾಕಲಾಗಿದ್ದು, ಅದರಲ್ಲಿದ್ದ ಸಾಮಗ್ರಿಗಳನ್ನು ಬಿಸಾಡಿ ನಾಶಪಡಿಸಲಾಗಿದೆ.

ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ನಾಲ್ಕು ಹಿಂದೂಯೇತರ ಅಂಗಡಿಗಳಿದ್ದವು. ಕಳೆದ ವಾರವಷ್ಟೇ ಶ್ರೀರಾಮ ಸೇನೆಯ ಕಾರ್ಯಕರ್ತರು ಬಂದು ಪ್ರತಿಭಟನೆ ಮಾಡಿದ್ದರು. ಈ ದೇವಸ್ಥಾನದಲ್ಲಿನ ಹಿಂದೂಯೇತರ ಅಂಗಡಿಗಳನ್ನು ತೆರವು ಮಾಡಿ, ಇಲ್ಲದೇ ಹೋದಲ್ಲಿ ನಾವೇ ತೆರವುಗೊಳಿಸುತ್ತೇವೆ ಎಂದು ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದ ಶ್ರೀರಾಮ ಸೇನೆ ಕಾರ‍್ಯಕರ್ತರು ಒಂದೇ ವಾರದಲ್ಲಿ ಮುಸ್ಲಿಂ ಸಮುದಾಯದ ಎರಡು ತೆಂಗಿನಕಾಯಿ ಹಾಗೂ ಎರಡು ಜ್ಯೂಸ್‌ ಅಂಗಡಿಗಳನ್ನು ಸ್ವತಃ ಹಣ್ಣು-ತೆಂಗಿನಕಾಯಿಗಳನ್ನು ಹೊರಗೆ ಚೆಲ್ಲುವ ಮೂಲಕ ತೆರವುಗೊಳಿಸಿದ್ದಾರೆ.

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more