Dharwad: ಶ್ರೀರಾಮಸೇನೆ ಕಾರ್ಯಕರ್ತರಿಂದ ದೇವಸ್ಥಾನದ ಬಳಿಯಿದ್ದ ಮುಸ್ಲಿಂ ಅಂಗಡಿಗಳು ಧ್ವಂಸ

Dharwad: ಶ್ರೀರಾಮಸೇನೆ ಕಾರ್ಯಕರ್ತರಿಂದ ದೇವಸ್ಥಾನದ ಬಳಿಯಿದ್ದ ಮುಸ್ಲಿಂ ಅಂಗಡಿಗಳು ಧ್ವಂಸ

Published : Apr 10, 2022, 11:35 AM ISTUpdated : Apr 10, 2022, 11:48 AM IST

ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ಹನುಮಂತನ ದೇವಸ್ಥಾನದ ಆವರಣದಲ್ಲಿನ ನಾಲ್ಕು ಮುಸ್ಲಿಂ ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಕ್ಷಕಶಃ ಧ್ವಂಸ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
 

ಧಾರವಾಡ (ಏ. 10): ದೇವಸ್ಥಾನದ ಆವರಣದಲ್ಲಿರುವ ಹಿಂದೂಯೇತರ ಅಂಗಡಿಗಳನ್ನು ತೆರವುಗೊಳಿಸುವ ಅಭಿಯಾನ ಇದೀಗ ಧಾರವಾಡದಲ್ಲಿ ತೀವ್ರ ಬಿಸಿ ಪಡೆದುಕೊಂಡಿದ್ದು, ಇಲ್ಲಿಯ ಪ್ರತಿಷ್ಠಿತ ನುಗ್ಗಿಕೇರಿ ಹನುಮಂತನ ದೇವಸ್ಥಾನದ ಆವರಣದಲ್ಲಿನ ನಾಲ್ಕು ಮುಸ್ಲಿಂ ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಕ್ಷಕಶಃ ಧ್ವಂಸ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ನಾಲ್ಕು ಅಂಗಡಿಗಳನ್ನು ತೆರವುಗೊಳಿಸಿರುವ ಶ್ರೀರಾಮ ಸೇನೆ ಕಾರ‍್ಯಕರ್ತರು ಈ ಮೂಲಕ ಕಾನೂನು ಕೈಗೆತ್ತಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿಂದ ರಾಜ್ಯದ ಹಲವೆಡೆ ದೇವಸ್ಥಾನದ ಆವರಣದಲ್ಲಿ ಇರುವ ಹಿಂದೂಯೇತರ ಅಂಗಡಿಗಳಿಗೆ ತೆರವುಗೊಳಿಸುವ ಚರ್ಚೆ ನಡೆಯುತ್ತಲೇ ಇದೆ. ಮನವಿ ಕೊಡುವುದು, ಒತ್ತಾಯಿಸುವುದು, ಪ್ರತಿಭಟನೆ ಅಷ್ಟಕ್ಕೇ ಈ ಅಭಿಯಾನ ಇಲ್ಲಿಯ ವರೆಗೆ ಸೀಮಿತವಾಗಿತ್ತು. ಇದೀಗ ಧಾರವಾಡದ ನುಗ್ಗಿಕೇರಿಯಲ್ಲಿ ಅಂಗಡಿಗಳನ್ನು ಎತ್ತಿ ಹಾಕಲಾಗಿದ್ದು, ಅದರಲ್ಲಿದ್ದ ಸಾಮಗ್ರಿಗಳನ್ನು ಬಿಸಾಡಿ ನಾಶಪಡಿಸಲಾಗಿದೆ.

ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ನಾಲ್ಕು ಹಿಂದೂಯೇತರ ಅಂಗಡಿಗಳಿದ್ದವು. ಕಳೆದ ವಾರವಷ್ಟೇ ಶ್ರೀರಾಮ ಸೇನೆಯ ಕಾರ್ಯಕರ್ತರು ಬಂದು ಪ್ರತಿಭಟನೆ ಮಾಡಿದ್ದರು. ಈ ದೇವಸ್ಥಾನದಲ್ಲಿನ ಹಿಂದೂಯೇತರ ಅಂಗಡಿಗಳನ್ನು ತೆರವು ಮಾಡಿ, ಇಲ್ಲದೇ ಹೋದಲ್ಲಿ ನಾವೇ ತೆರವುಗೊಳಿಸುತ್ತೇವೆ ಎಂದು ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದ ಶ್ರೀರಾಮ ಸೇನೆ ಕಾರ‍್ಯಕರ್ತರು ಒಂದೇ ವಾರದಲ್ಲಿ ಮುಸ್ಲಿಂ ಸಮುದಾಯದ ಎರಡು ತೆಂಗಿನಕಾಯಿ ಹಾಗೂ ಎರಡು ಜ್ಯೂಸ್‌ ಅಂಗಡಿಗಳನ್ನು ಸ್ವತಃ ಹಣ್ಣು-ತೆಂಗಿನಕಾಯಿಗಳನ್ನು ಹೊರಗೆ ಚೆಲ್ಲುವ ಮೂಲಕ ತೆರವುಗೊಳಿಸಿದ್ದಾರೆ.

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more