ಧಾರವಾಡದಲ್ಲಿ ಮುಸ್ಲಿಂ ಅಂಗಡಿ ತೆರವು: ನನ್ನನ್ನು ಕೊಂದು ಬಿಡಿ ಎಂದು ಅಂಗಡಿ ಮಾಲಿಕ ಕಣ್ಣೀರು

ಧಾರವಾಡದಲ್ಲಿ ಮುಸ್ಲಿಂ ಅಂಗಡಿ ತೆರವು: ನನ್ನನ್ನು ಕೊಂದು ಬಿಡಿ ಎಂದು ಅಂಗಡಿ ಮಾಲಿಕ ಕಣ್ಣೀರು

Published : Apr 10, 2022, 04:20 PM IST

'15 ವರ್ಷಗಳಿಂದ ಹನುಮಂತ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಶನಿವಾರ ಏಕಾಏಕಿ ಹತ್ತುಕ್ಕೂ ಹೆಚ್ಚು ಕಾರ‍್ಯಕರ್ತರು ಅಂಗಡಿಗಳಿಗೆ ನುಗ್ಗಿ ಆರು ಕ್ವಿಂಟಲ್‌ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಹಾಕಿದರು: ಅಂಗಡಿ ಮಾಲೀಕ ನಬೀಸಾಬ

ಧಾರವಾಡ (ಏ. 10): ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ನಾಲ್ಕು ಹಿಂದೂಯೇತರ ಅಂಗಡಿಗಳಿದ್ದವು. ಈ ಅಂಗಡಿಗಳನ್ನು ತೆರವು ಮಾಡಿ, ಇಲ್ಲದೇ ಹೋದಲ್ಲಿ ನಾವೇ ತೆರವುಗೊಳಿಸುತ್ತೇವೆ ಎಂದು ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದ ಶ್ರೀರಾಮ ಸೇನೆ ಕಾರ‍್ಯಕರ್ತರು ಒಂದೇ ವಾರದಲ್ಲಿ ಮುಸ್ಲಿಂ ಸಮುದಾಯದ ಎರಡು ತೆಂಗಿನಕಾಯಿ ಹಾಗೂ ಎರಡು ಜ್ಯೂಸ್‌ ಅಂಗಡಿಗಳನ್ನು ಸ್ವತಃ ಹಣ್ಣು-ತೆಂಗಿನಕಾಯಿಗಳನ್ನು ಹೊರಗೆ ಚೆಲ್ಲುವ ಮೂಲಕ ತೆರವುಗೊಳಿಸಿದ್ದಾರೆ.

'15 ವರ್ಷಗಳಿಂದ ಹನುಮಂತ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಶನಿವಾರ ಏಕಾಏಕಿ ಹತ್ತುಕ್ಕೂ ಹೆಚ್ಚು ಕಾರ‍್ಯಕರ್ತರು ಅಂಗಡಿಗಳಿಗೆ ನುಗ್ಗಿ ಆರು ಕ್ವಿಂಟಲ್‌ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಹಾಕಿದರು. ಈಗಾಗಲೇ ನಿಮಗೆ ಅಂಗಡಿ ತಗೀಬೇಕು ಎಂದು ಹೇಳಲಾಗಿತ್ತು. ಆದರೂ ಹಚ್ಚಿರುವೆ ಎಂದು ದಬಾಯಿಸಿ ಅಂಗಡಿಯ ಹಣ್ಣುಗಳನ್ನು ಹೊರ ಹಾಕಿ ಚೆಲ್ಲಾಪಿಲ್ಲಿಯಾಗಿ ಎಸೆದರು. ದೇವಸ್ಥಾನದವರು ಮುಂದಿನ ವಾರದಲ್ಲಿ ಅಂಗಡಿ ತೆರವು ಮಾಡಲು ಹೇಳಿದ್ದರು. ಆದರೆ, ಹೊಟ್ಟೆಪಾಡಿಗಾಗಿ ಇದೊಂದು ದುಡಿಮೆ. ಈ ರೀತಿ ಆಗಿದ್ದು ಬಡವರ ಬದುಕು ಹೇಗೆ' ಎಂದು ಹಣ್ಣಿನ ಅಂಗಡಿ ಮಾಲೀಕ ನಬೀಸಾಬ ಪ್ರಶ್ನಿಸಿದರು.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more