ಧಾರವಾಡದಲ್ಲಿ ಮುಸ್ಲಿಂ ಅಂಗಡಿ ತೆರವು: ನನ್ನನ್ನು ಕೊಂದು ಬಿಡಿ ಎಂದು ಅಂಗಡಿ ಮಾಲಿಕ ಕಣ್ಣೀರು

ಧಾರವಾಡದಲ್ಲಿ ಮುಸ್ಲಿಂ ಅಂಗಡಿ ತೆರವು: ನನ್ನನ್ನು ಕೊಂದು ಬಿಡಿ ಎಂದು ಅಂಗಡಿ ಮಾಲಿಕ ಕಣ್ಣೀರು

Published : Apr 10, 2022, 04:20 PM IST

'15 ವರ್ಷಗಳಿಂದ ಹನುಮಂತ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಶನಿವಾರ ಏಕಾಏಕಿ ಹತ್ತುಕ್ಕೂ ಹೆಚ್ಚು ಕಾರ‍್ಯಕರ್ತರು ಅಂಗಡಿಗಳಿಗೆ ನುಗ್ಗಿ ಆರು ಕ್ವಿಂಟಲ್‌ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಹಾಕಿದರು: ಅಂಗಡಿ ಮಾಲೀಕ ನಬೀಸಾಬ

ಧಾರವಾಡ (ಏ. 10): ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ನಾಲ್ಕು ಹಿಂದೂಯೇತರ ಅಂಗಡಿಗಳಿದ್ದವು. ಈ ಅಂಗಡಿಗಳನ್ನು ತೆರವು ಮಾಡಿ, ಇಲ್ಲದೇ ಹೋದಲ್ಲಿ ನಾವೇ ತೆರವುಗೊಳಿಸುತ್ತೇವೆ ಎಂದು ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದ ಶ್ರೀರಾಮ ಸೇನೆ ಕಾರ‍್ಯಕರ್ತರು ಒಂದೇ ವಾರದಲ್ಲಿ ಮುಸ್ಲಿಂ ಸಮುದಾಯದ ಎರಡು ತೆಂಗಿನಕಾಯಿ ಹಾಗೂ ಎರಡು ಜ್ಯೂಸ್‌ ಅಂಗಡಿಗಳನ್ನು ಸ್ವತಃ ಹಣ್ಣು-ತೆಂಗಿನಕಾಯಿಗಳನ್ನು ಹೊರಗೆ ಚೆಲ್ಲುವ ಮೂಲಕ ತೆರವುಗೊಳಿಸಿದ್ದಾರೆ.

'15 ವರ್ಷಗಳಿಂದ ಹನುಮಂತ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಶನಿವಾರ ಏಕಾಏಕಿ ಹತ್ತುಕ್ಕೂ ಹೆಚ್ಚು ಕಾರ‍್ಯಕರ್ತರು ಅಂಗಡಿಗಳಿಗೆ ನುಗ್ಗಿ ಆರು ಕ್ವಿಂಟಲ್‌ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಹಾಕಿದರು. ಈಗಾಗಲೇ ನಿಮಗೆ ಅಂಗಡಿ ತಗೀಬೇಕು ಎಂದು ಹೇಳಲಾಗಿತ್ತು. ಆದರೂ ಹಚ್ಚಿರುವೆ ಎಂದು ದಬಾಯಿಸಿ ಅಂಗಡಿಯ ಹಣ್ಣುಗಳನ್ನು ಹೊರ ಹಾಕಿ ಚೆಲ್ಲಾಪಿಲ್ಲಿಯಾಗಿ ಎಸೆದರು. ದೇವಸ್ಥಾನದವರು ಮುಂದಿನ ವಾರದಲ್ಲಿ ಅಂಗಡಿ ತೆರವು ಮಾಡಲು ಹೇಳಿದ್ದರು. ಆದರೆ, ಹೊಟ್ಟೆಪಾಡಿಗಾಗಿ ಇದೊಂದು ದುಡಿಮೆ. ಈ ರೀತಿ ಆಗಿದ್ದು ಬಡವರ ಬದುಕು ಹೇಗೆ' ಎಂದು ಹಣ್ಣಿನ ಅಂಗಡಿ ಮಾಲೀಕ ನಬೀಸಾಬ ಪ್ರಶ್ನಿಸಿದರು.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more