ಧಾರವಾಡದಲ್ಲಿ ಮುಸ್ಲಿಂ ಅಂಗಡಿ ತೆರವು: ನನ್ನನ್ನು ಕೊಂದು ಬಿಡಿ ಎಂದು ಅಂಗಡಿ ಮಾಲಿಕ ಕಣ್ಣೀರು

ಧಾರವಾಡದಲ್ಲಿ ಮುಸ್ಲಿಂ ಅಂಗಡಿ ತೆರವು: ನನ್ನನ್ನು ಕೊಂದು ಬಿಡಿ ಎಂದು ಅಂಗಡಿ ಮಾಲಿಕ ಕಣ್ಣೀರು

Published : Apr 10, 2022, 04:20 PM IST

'15 ವರ್ಷಗಳಿಂದ ಹನುಮಂತ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಶನಿವಾರ ಏಕಾಏಕಿ ಹತ್ತುಕ್ಕೂ ಹೆಚ್ಚು ಕಾರ‍್ಯಕರ್ತರು ಅಂಗಡಿಗಳಿಗೆ ನುಗ್ಗಿ ಆರು ಕ್ವಿಂಟಲ್‌ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಹಾಕಿದರು: ಅಂಗಡಿ ಮಾಲೀಕ ನಬೀಸಾಬ

ಧಾರವಾಡ (ಏ. 10): ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ನಾಲ್ಕು ಹಿಂದೂಯೇತರ ಅಂಗಡಿಗಳಿದ್ದವು. ಈ ಅಂಗಡಿಗಳನ್ನು ತೆರವು ಮಾಡಿ, ಇಲ್ಲದೇ ಹೋದಲ್ಲಿ ನಾವೇ ತೆರವುಗೊಳಿಸುತ್ತೇವೆ ಎಂದು ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದ ಶ್ರೀರಾಮ ಸೇನೆ ಕಾರ‍್ಯಕರ್ತರು ಒಂದೇ ವಾರದಲ್ಲಿ ಮುಸ್ಲಿಂ ಸಮುದಾಯದ ಎರಡು ತೆಂಗಿನಕಾಯಿ ಹಾಗೂ ಎರಡು ಜ್ಯೂಸ್‌ ಅಂಗಡಿಗಳನ್ನು ಸ್ವತಃ ಹಣ್ಣು-ತೆಂಗಿನಕಾಯಿಗಳನ್ನು ಹೊರಗೆ ಚೆಲ್ಲುವ ಮೂಲಕ ತೆರವುಗೊಳಿಸಿದ್ದಾರೆ.

'15 ವರ್ಷಗಳಿಂದ ಹನುಮಂತ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಶನಿವಾರ ಏಕಾಏಕಿ ಹತ್ತುಕ್ಕೂ ಹೆಚ್ಚು ಕಾರ‍್ಯಕರ್ತರು ಅಂಗಡಿಗಳಿಗೆ ನುಗ್ಗಿ ಆರು ಕ್ವಿಂಟಲ್‌ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಹಾಕಿದರು. ಈಗಾಗಲೇ ನಿಮಗೆ ಅಂಗಡಿ ತಗೀಬೇಕು ಎಂದು ಹೇಳಲಾಗಿತ್ತು. ಆದರೂ ಹಚ್ಚಿರುವೆ ಎಂದು ದಬಾಯಿಸಿ ಅಂಗಡಿಯ ಹಣ್ಣುಗಳನ್ನು ಹೊರ ಹಾಕಿ ಚೆಲ್ಲಾಪಿಲ್ಲಿಯಾಗಿ ಎಸೆದರು. ದೇವಸ್ಥಾನದವರು ಮುಂದಿನ ವಾರದಲ್ಲಿ ಅಂಗಡಿ ತೆರವು ಮಾಡಲು ಹೇಳಿದ್ದರು. ಆದರೆ, ಹೊಟ್ಟೆಪಾಡಿಗಾಗಿ ಇದೊಂದು ದುಡಿಮೆ. ಈ ರೀತಿ ಆಗಿದ್ದು ಬಡವರ ಬದುಕು ಹೇಗೆ' ಎಂದು ಹಣ್ಣಿನ ಅಂಗಡಿ ಮಾಲೀಕ ನಬೀಸಾಬ ಪ್ರಶ್ನಿಸಿದರು.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more