ಡಿಸಿಎಂ ಲೈಸೆನ್ಸ್ ನೀಡ್ತೀವಿ ಅಂದ್ರೆ..ಸಿಎಂ NO ಅಂತಾರೆ..! ಕಾಂಗ್ರೆಸ್ ನಡೆಗೆ ವಿಪಕ್ಷಗಳ ಲೇವಡಿ!

ಡಿಸಿಎಂ ಲೈಸೆನ್ಸ್ ನೀಡ್ತೀವಿ ಅಂದ್ರೆ..ಸಿಎಂ NO ಅಂತಾರೆ..! ಕಾಂಗ್ರೆಸ್ ನಡೆಗೆ ವಿಪಕ್ಷಗಳ ಲೇವಡಿ!

Published : Oct 08, 2023, 02:20 PM IST

ಒಂದು ಕಡೆ ಕೊಡ್ತಾರೆ.. ಇನ್ನೊಂದು ಕಡೆ ಕಿತ್ಕೊತಾರೆ!
ಉದ್ಯೋಗ ಸೃಷ್ಟಿಗೆ ಬಾರ್ ತೆಗೆಯೋದು ಬೇಕಿಲ್ಲವೆಂದ ಜನ!
ಸರ್ಕಾರದ ದ್ವಂದ್ವ ನಿಲುವು.. ಯಾವುದರ ಸುಳಿವು..?

ಮದ್ಯದಂಗಡಿ ತೆರೆಯೋದಕ್ಕೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಉತ್ಸುಕರಾದ ಹಾಗೆ ಕಾಣ್ತಾ ಇದೆ. ಆದ್ರೆ ಸಿಎಂ ಸಾಹೇಬರು ಮಾತ್ರ, ಈ ನಿರ್ಧಾರಕ್ಕೆ ವಿರೋಧ ದಿಕ್ಕಲ್ಲಿ ಯೋಚಿಸ್ತಾ ಇದಾರೆ. ಜನಕ್ಕೆ ಯಾವ್ದು ಅನುಕೂಲನೋ, ಯಾವ್ದು ಶಾಪಾನೋ, ಜನರೇ ಡಿಸೈಡ್ ಮಾಡ್ತಾರೆ ಅಂತಿದ್ದಾರೆ. ಸಿದ್ದರಾಮಯ್ಯ(Siddaramaiah) ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭಾಗ್ಯಗಳನ್ನ ಕೊಟ್ಟು, ಜನಮನ ಗೆದ್ದಿದೆ. ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳಂತೂ ಜನರ ಕಣ್ಣಿಗೆ ಎದ್ದು ಕಾಣ್ತಿದ್ದಾವೆ. ಆದ್ರೆ, ಈಗಷ್ಟೇ ಅಧಿಕಾರಕ್ಕೆ ಬಂದಿರೋ ಕಾಂಗ್ರೆಸ್‌ಗೆ ಸಾಲು ಸಾಲು ಸವಾಲುಗಳು ಸಹ ಎದುರಾಗ್ತಾ ಇದಾವೆ. ಅಂಥಾ ಸವಾಲಿನ ಪಟ್ಟಿಗೆ ಈಗ ಹೊಸದೊಂದು ಗೊಂದಲ ಸೇರ್ಪಡೆಯಾಗಿದೆ. ಅದೇ ಮದ್ಯದ ಲೈಸೆನ್ಸ್ ವಿಚಾರ. ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಳೆದ 30 ವರ್ಷಗಳಿಂದ ಬಾರ್ ಲೈಸೆನ್ಸ್(Bar license) ಕೊಟ್ಟೇ ಇಲ್ಲ. ಹಾಗಾಗಿ, ಈಗ ಮತ್ತೆ ಲೈಸೆನ್ಸ್ ಕೊಟ್ರೆ ಒಳ್ಳೇದು ಅನ್ನೋ ಮಾತಾಡ್ತಾ ಇದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಸೂಪರ್ ಮಾರ್ಕೆಟ್‌ಗಳಲ್ಲೂ ಮದ್ಯದಂಗಡಿ ಓಪನ್ ಮಾಡೋಕೆ ಅವಕಾಶ ಕೊಡೋಕೆ ಸರ್ಕಾರ ಸಿದ್ಧವಾಗಿತ್ತಂತೆ. ಹೊಸದಾಗಿ 389 ಮದ್ಯದಂಗಡಿ ತೆರೆಯೋದಕ್ಕೆ ರಾಜ್ಯ ಸರ್ಕಾರದ ಪ್ಲಾನ್ ಮಾಡ್ಕೊಂಡಿದೆ ಅನ್ನೋ ಮಾತು ಕೇಳಿಬಂದಿತ್ತು. ಆದ್ರೆ ಈ ಮಾತೇ ಭಾರಿ ವಿರೋಧಕ್ಕೆ ಕಾರಣವಾಗಿತ್ತು. ಜಿಲ್ಲೆ ಜಿಲ್ಲೆಯಲ್ಲೂ ಮಹಿಳೆಯರು ದಂಗೆ ಎದ್ದಿದ್ರು. ಪ್ರತಿಭಟನೆ ಕಹಳೆ ಮೊಳಗಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಆಗ್ರಹಿಸಿದ್ದರು. ಈ ಹೋರಾಟ, ಆಕ್ರೋಶಗಳ ಮಧ್ಯೆನೇ ಸಿಎಂ ಸಿದ್ದರಾಮಯ್ಯ ಹೊಸದಾಗಿ ಯಾವುದೇ ಬಾರ್ ತೆರೆಯಲ್ಲ ಅನ್ನೋ ಭರವಸೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಅನೇಕಲ್‌ ಪಟಾಕಿ ದುರಂತಕ್ಕೆ ಕಾರಣವೇನು ? ಬಾಕ್ಸ್‌ ಶಿಫ್ಟ್‌ ಮಾಡುವಾಗಲೇ ಆಯಿತಾ ಯಡವಟ್ಟು ?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more