ಇದು ನೋಡಿ ಸಾಮಾಜಿಕ ನ್ಯಾಯ; 31 ವರ್ಷದ ಹಿಂದಿನ ಕೇಸ್‌ಗೆ ಜೈಲು, ಪೊಲೀಸ್‌ ಸ್ಟೇಷನ್‌ ಸುಟ್ಟವರು ಅಮಾಯಕರು!

ಇದು ನೋಡಿ ಸಾಮಾಜಿಕ ನ್ಯಾಯ; 31 ವರ್ಷದ ಹಿಂದಿನ ಕೇಸ್‌ಗೆ ಜೈಲು, ಪೊಲೀಸ್‌ ಸ್ಟೇಷನ್‌ ಸುಟ್ಟವರು ಅಮಾಯಕರು!

Published : Jan 06, 2024, 11:34 PM IST

ನಮ್ಮದು ಸಾಮಾಜಿಕ ನ್ಯಾಯದ ಸರ್ಕಾರ ಎನ್ನುತ್ತಲೇ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ ಸರ್ಕಾರ, ಓಲೈಕೆ ರಾಜಕಾರಣಕ್ಕೆ ಇಳಿದಿದ್ಯಾ ಎನ್ನುವ ಅನುಮಾನ ಈ ಎರಡೂ ಪ್ರಕರಣಗಳು ತಾಳೆ ಹಾಕಿದಾಗ ಖಂಡಿತಾ ಬರುತ್ತದೆ.
 

ಬೆಂಗಳೂರು (ಜ.6): ಇನ್ನೇನು ರಾಮ ಮಂದಿರ ಉದ್ಘಾಟನೆ ಆಗಲು ಕೆಲವೇ ದಿನಗಳಿವೆ. ಈ ಹಂತದಲ್ಲಿ ಕರಸೇವಕರಿಗೆ ಎಚ್ಚರಿಕೆ ಮುಟ್ಟಿಸುವ ಅರ್ಥದಲ್ಲಿ ರಾಜ್ಯ ಸರ್ಕಾರ 31 ವರ್ಷದ ಹಿಂದಿನ ಕೇಸ್‌ನಲ್ಲಿ ಕರಸೇವಕ ಶ್ರೀಕಾಂತ್‌ ಪೂಜಾರಿಯನ್ನು ಬಂಧಿಸಿತ್ತು ಜಾಮೀನು ಪಡೆದುಕೊಂಡಿದ್ದ ಅವರು ಹುಬ್ಬಳ್ಳಿ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾರೆ.

ಇನ್ನೊಂದೆಡೆ ಮೂರು ವರ್ಷಗಳ ಹಿಂದೆ ಪೊಲೀಸರ ಕಣ್ಣೆದುರಲ್ಲಿಯೇ ಇಡೀ ಪೊಲೀಸ್‌ ಠಾಣೆಯನ್ನು ಅವರ ವಾಹನಗಳನ್ನು ಸುಟ್ಟಿ ಹಾಕಿದ್ದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವ್ಯಕ್ತಿಗಳು ಅಮಾಯಕರು ಎಂದು ಸ್ವತಃ ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್‌ ಶೀಘ್ರದಲ್ಲೇ ಅವರು ಬಿಡುಗಡೆಯೂ ಆಗುತ್ತಾರೆ ಎಂದು ಸೂಚನೆ ನೀಡಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಕೋರರು ಅಮಾಯಕರು: ಜೈಲಿಂದ ಬಿಟ್ಟುಬಿಡಿ ಎಂದ ಕಾಂಗ್ರೆಸ್ ಶಾಸಕ ಶ್ರೀನಿವಾಸ್

ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡುತ್ತೇವೆ ಎಂದೇ ಅಧಿಕಾರ ಹಿಡಿದಿದ್ದ ಕಾಂಗ್ರೆಸ್‌ ಸರ್ಕಾರ ಒಂದು ವರ್ಗದ ಓಲೈಕೆ ಮಾಡುತ್ತಿದ್ಯಾ ಎನ್ನುವ ಅನುಮಾನ ಕಾಡದೇ ಇರದು. ಈಗಾಗಲೇ ಸಾಕಷ್ಟು ಹಿಂದೂ ಕಾರ್ಯಕರ್ತರ ಹಳೇ ಕೇಸ್‌ಗಳನ್ನು ಓಪನ್‌ ಮಾಡಿಸಿರುವ ಸರ್ಕಾರ, ಜನರ ಕಣ್ಣೆದುರೇ ನಡೆದ ದೊಂಬಿಯಲ್ಲಿ ಆರೋಪಿಗಳ ಪರವಾಗಿ ನಿಂತಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more