ಇದು ನೋಡಿ ಸಾಮಾಜಿಕ ನ್ಯಾಯ; 31 ವರ್ಷದ ಹಿಂದಿನ ಕೇಸ್‌ಗೆ ಜೈಲು, ಪೊಲೀಸ್‌ ಸ್ಟೇಷನ್‌ ಸುಟ್ಟವರು ಅಮಾಯಕರು!

ಇದು ನೋಡಿ ಸಾಮಾಜಿಕ ನ್ಯಾಯ; 31 ವರ್ಷದ ಹಿಂದಿನ ಕೇಸ್‌ಗೆ ಜೈಲು, ಪೊಲೀಸ್‌ ಸ್ಟೇಷನ್‌ ಸುಟ್ಟವರು ಅಮಾಯಕರು!

Published : Jan 06, 2024, 11:34 PM IST

ನಮ್ಮದು ಸಾಮಾಜಿಕ ನ್ಯಾಯದ ಸರ್ಕಾರ ಎನ್ನುತ್ತಲೇ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ ಸರ್ಕಾರ, ಓಲೈಕೆ ರಾಜಕಾರಣಕ್ಕೆ ಇಳಿದಿದ್ಯಾ ಎನ್ನುವ ಅನುಮಾನ ಈ ಎರಡೂ ಪ್ರಕರಣಗಳು ತಾಳೆ ಹಾಕಿದಾಗ ಖಂಡಿತಾ ಬರುತ್ತದೆ.
 

ಬೆಂಗಳೂರು (ಜ.6): ಇನ್ನೇನು ರಾಮ ಮಂದಿರ ಉದ್ಘಾಟನೆ ಆಗಲು ಕೆಲವೇ ದಿನಗಳಿವೆ. ಈ ಹಂತದಲ್ಲಿ ಕರಸೇವಕರಿಗೆ ಎಚ್ಚರಿಕೆ ಮುಟ್ಟಿಸುವ ಅರ್ಥದಲ್ಲಿ ರಾಜ್ಯ ಸರ್ಕಾರ 31 ವರ್ಷದ ಹಿಂದಿನ ಕೇಸ್‌ನಲ್ಲಿ ಕರಸೇವಕ ಶ್ರೀಕಾಂತ್‌ ಪೂಜಾರಿಯನ್ನು ಬಂಧಿಸಿತ್ತು ಜಾಮೀನು ಪಡೆದುಕೊಂಡಿದ್ದ ಅವರು ಹುಬ್ಬಳ್ಳಿ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾರೆ.

ಇನ್ನೊಂದೆಡೆ ಮೂರು ವರ್ಷಗಳ ಹಿಂದೆ ಪೊಲೀಸರ ಕಣ್ಣೆದುರಲ್ಲಿಯೇ ಇಡೀ ಪೊಲೀಸ್‌ ಠಾಣೆಯನ್ನು ಅವರ ವಾಹನಗಳನ್ನು ಸುಟ್ಟಿ ಹಾಕಿದ್ದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವ್ಯಕ್ತಿಗಳು ಅಮಾಯಕರು ಎಂದು ಸ್ವತಃ ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್‌ ಶೀಘ್ರದಲ್ಲೇ ಅವರು ಬಿಡುಗಡೆಯೂ ಆಗುತ್ತಾರೆ ಎಂದು ಸೂಚನೆ ನೀಡಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಕೋರರು ಅಮಾಯಕರು: ಜೈಲಿಂದ ಬಿಟ್ಟುಬಿಡಿ ಎಂದ ಕಾಂಗ್ರೆಸ್ ಶಾಸಕ ಶ್ರೀನಿವಾಸ್

ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡುತ್ತೇವೆ ಎಂದೇ ಅಧಿಕಾರ ಹಿಡಿದಿದ್ದ ಕಾಂಗ್ರೆಸ್‌ ಸರ್ಕಾರ ಒಂದು ವರ್ಗದ ಓಲೈಕೆ ಮಾಡುತ್ತಿದ್ಯಾ ಎನ್ನುವ ಅನುಮಾನ ಕಾಡದೇ ಇರದು. ಈಗಾಗಲೇ ಸಾಕಷ್ಟು ಹಿಂದೂ ಕಾರ್ಯಕರ್ತರ ಹಳೇ ಕೇಸ್‌ಗಳನ್ನು ಓಪನ್‌ ಮಾಡಿಸಿರುವ ಸರ್ಕಾರ, ಜನರ ಕಣ್ಣೆದುರೇ ನಡೆದ ದೊಂಬಿಯಲ್ಲಿ ಆರೋಪಿಗಳ ಪರವಾಗಿ ನಿಂತಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more