Karnataka Politics: ಗೌಡರ ಕೋಟೆ ಹಾಸನದಲ್ಲಿ ಡಿಕೆಶಿ ಹಳೆ ಸೋಲು-ಗೆಲುವು ಲೆಕ್ಕಾಚಾರ

Karnataka Politics: ಗೌಡರ ಕೋಟೆ ಹಾಸನದಲ್ಲಿ ಡಿಕೆಶಿ ಹಳೆ ಸೋಲು-ಗೆಲುವು ಲೆಕ್ಕಾಚಾರ

Suvarna News   | Asianet News
Published : Dec 27, 2021, 03:20 PM ISTUpdated : Dec 27, 2021, 04:11 PM IST

ಯಾವುದೂ ಶಾಶ್ವತವಲ್ಲ. ಸೋಲು- ಗೆಲುವು ಶಾಶ್ವತವಲ್ಲ. ಹಲವು ಬಾರಿ ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಹಾಸನದಲ್ಲಿ ಇಂದು ಗೆದ್ದಿರುವವರು ನಾಳೆ ಸೋಲುವ ದಿನ ದೂರವಿಲ್ಲ,  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. 

ಬೆಂಗಳೂರು (ಡಿ. 27): ರಾಜಕಾರಣದಲ್ಲಿ (Politics) ಯಾವುದೂ ಶಾಶ್ವತವಲ್ಲ. ಸೋಲು- ಗೆಲುವು ಶಾಶ್ವತವಲ್ಲ. ಹಲವು ಬಾರಿ ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಹಾಸನದಲ್ಲಿ ಇಂದು ಗೆದ್ದಿರುವವರು ನಾಳೆ ಸೋಲುವ ದಿನ ದೂರವಿಲ್ಲ. ದೇವೇಗೌಡರು ತೇಜಸ್ವಿನಿ ವಿರುದ್ಧ ಸೋತಿದ್ದರು, ನಾನು ದೇವೇಗೌಡರ (HD Devegowda) ವಿರುದ್ಧ ಸೋತಿದ್ದೇನೆ. ದೇವೇಗೌಡರ ಪುತ್ರ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ನಾನು ಗೆದ್ದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. 

ಜೆಡಿಎಸ್‌ ಇಡೀ ರಾಜ್ಯದಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದು, ಮಂಡ್ಯ, ಮೈಸೂರು ಸೇರಿ ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಇತ್ತೀಚೆಗೆ ನಡೆದ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ನ ಏಳು ಶಾಸಕರಿದ್ದರೂ ನಮ್ಮ ಅಭ್ಯರ್ಥಿ, ಸಾಮಾನ್ಯ ಕಾರ್ಯಕರ್ತ ಗೂಳಿಗೌಡ ಗೂಳಿಯಂತೆ ಜಿಲ್ಲಾದ್ಯಂತ ಸಂಚಾರ ಮಾಡಿ ಜಯಗಳಿಸಿದ್ದಾರೆ ಎಂದರು. ಇನ್ನು ಜೆಡಿಎಸ್‌ನಲ್ಲಿ 80 ಶಾಸಕರಿದ್ದರು. ಅದರಲ್ಲಿ 13 ಮಂದಿ ಬೇರೆ ಪಕ್ಷಕ್ಕೆ ಹೋಗಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಹೋಗಿರುವವರೂ ಮತ್ತೆ ಪಕ್ಷ ಸೇರ್ಪಡೆಯಾಗಲು ಸಾಲಿನಲ್ಲಿ ನಿಂತಿದ್ದಾರೆ ಎಂದು ಇದೇ ವೇಳೆ ಡಿಕೆಶಿ ಹೇಳಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more