Karnataka Politics: ಗೌಡರ ಕೋಟೆ ಹಾಸನದಲ್ಲಿ ಡಿಕೆಶಿ ಹಳೆ ಸೋಲು-ಗೆಲುವು ಲೆಕ್ಕಾಚಾರ

Karnataka Politics: ಗೌಡರ ಕೋಟೆ ಹಾಸನದಲ್ಲಿ ಡಿಕೆಶಿ ಹಳೆ ಸೋಲು-ಗೆಲುವು ಲೆಕ್ಕಾಚಾರ

Published : Dec 27, 2021, 03:20 PM ISTUpdated : Dec 27, 2021, 04:11 PM IST

ಯಾವುದೂ ಶಾಶ್ವತವಲ್ಲ. ಸೋಲು- ಗೆಲುವು ಶಾಶ್ವತವಲ್ಲ. ಹಲವು ಬಾರಿ ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಹಾಸನದಲ್ಲಿ ಇಂದು ಗೆದ್ದಿರುವವರು ನಾಳೆ ಸೋಲುವ ದಿನ ದೂರವಿಲ್ಲ,  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. 

ಬೆಂಗಳೂರು (ಡಿ. 27): ರಾಜಕಾರಣದಲ್ಲಿ (Politics) ಯಾವುದೂ ಶಾಶ್ವತವಲ್ಲ. ಸೋಲು- ಗೆಲುವು ಶಾಶ್ವತವಲ್ಲ. ಹಲವು ಬಾರಿ ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಹಾಸನದಲ್ಲಿ ಇಂದು ಗೆದ್ದಿರುವವರು ನಾಳೆ ಸೋಲುವ ದಿನ ದೂರವಿಲ್ಲ. ದೇವೇಗೌಡರು ತೇಜಸ್ವಿನಿ ವಿರುದ್ಧ ಸೋತಿದ್ದರು, ನಾನು ದೇವೇಗೌಡರ (HD Devegowda) ವಿರುದ್ಧ ಸೋತಿದ್ದೇನೆ. ದೇವೇಗೌಡರ ಪುತ್ರ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ನಾನು ಗೆದ್ದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. 

ಜೆಡಿಎಸ್‌ ಇಡೀ ರಾಜ್ಯದಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದು, ಮಂಡ್ಯ, ಮೈಸೂರು ಸೇರಿ ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಇತ್ತೀಚೆಗೆ ನಡೆದ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ನ ಏಳು ಶಾಸಕರಿದ್ದರೂ ನಮ್ಮ ಅಭ್ಯರ್ಥಿ, ಸಾಮಾನ್ಯ ಕಾರ್ಯಕರ್ತ ಗೂಳಿಗೌಡ ಗೂಳಿಯಂತೆ ಜಿಲ್ಲಾದ್ಯಂತ ಸಂಚಾರ ಮಾಡಿ ಜಯಗಳಿಸಿದ್ದಾರೆ ಎಂದರು. ಇನ್ನು ಜೆಡಿಎಸ್‌ನಲ್ಲಿ 80 ಶಾಸಕರಿದ್ದರು. ಅದರಲ್ಲಿ 13 ಮಂದಿ ಬೇರೆ ಪಕ್ಷಕ್ಕೆ ಹೋಗಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಹೋಗಿರುವವರೂ ಮತ್ತೆ ಪಕ್ಷ ಸೇರ್ಪಡೆಯಾಗಲು ಸಾಲಿನಲ್ಲಿ ನಿಂತಿದ್ದಾರೆ ಎಂದು ಇದೇ ವೇಳೆ ಡಿಕೆಶಿ ಹೇಳಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more