ಪ್ರಕರಣ ಹಿಂಪಡೆಯೋಕೆ ತಯಾರಾಗಿದೆಯಾ ತಂತ್ರ ? ಏನಿದು ಹಳೇ ಹುಬ್ಬಳ್ಳಿ ಗಲಭೆ ಕೇಸ್..?

ಪ್ರಕರಣ ಹಿಂಪಡೆಯೋಕೆ ತಯಾರಾಗಿದೆಯಾ ತಂತ್ರ ? ಏನಿದು ಹಳೇ ಹುಬ್ಬಳ್ಳಿ ಗಲಭೆ ಕೇಸ್..?

Published : Oct 04, 2023, 02:37 PM IST

ಗಲಭೆಗೆ ಕಾರಣವಾಗಿತ್ತು ಒಂದು ವಾಟ್ಸಾಪ್ ಸ್ಟೇಟಸ್!
ಕಾಂಗ್ರೆಸ್ ನಾಯಕರ ಮಾತಲ್ಲಿ ಅಡಗಿದ ರಹಸ್ಯವೇನು..?
ಒಂದೊಂದು ಯೋಜನೆಗೂ ಲೋಕಸಭೆಯೇ ಟಾರ್ಗೆಟ್?!

ಇವತ್ತಿನ ಈ ಸುದ್ದಿ ನಿಜಕ್ಕೂ ಆಘಾತಕಾರಿ.. ಆತಂಕಕಾರಿ.. ಈ ಬಾರಿ ಸರ್ಕಾರ ಕೈಗೆತ್ತಿಕೊಳ್ಳೋಕೆ ನೋಡ್ತಾ ಇರೋ ಅದೊಂದು ತೀರ್ಮಾನ, ಡಿಸಿಎಂ ಡಿಕೆ ಶಿವಕುಮಾರ್(D.K.Shivakumar) ಅವರ ಒಂದು ನಡೆ, ಜನಸಾಮಾನ್ಯರಲ್ಲಿ ಒಂದು ರೀತಿಯ ಆತಂಕದ ಕಾರ್ಮೋಡ ಮೂಡಿಸಿದೆ. ಅವತ್ತಿನ ಆ ದಿನವನ್ನ ಬರೀ ಡಿಜೆ ಹಳ್ಳಿ, ಕೆಜಿ ಹಳ್ಳಿ ಜನ ಮಾತ್ರವೇ ಅಲ್ಲ. ಇಡೀ ಬೆಂಗಳೂರು(Bengaluru), ಬೆಂಗಳೂರೇನು, ಇಡೀ ಕರ್ನಾಟಕ, ಕರ್ನಾಟಕ ಅಷ್ಟೇ ಯಾಕೆ, ಇಡೀ ದೇಶವೇ ಮರೆಯೋ ಹಾಗಿಲ್ಲ. ಜಗತ್ತೆಲ್ಲಾ ಕೋವಿಡ್ ಅನ್ನೋ ಹೆಮ್ಮಾರಿಯಿಂದ ಹೇಗಪ್ಪಾ ಬಚಾವ್ ಆಗೋದು ಅಂತ ಯೋಚನೆಲಿ ಮುಳುಗಿದ್ರೆ, ಬೆಂಗಳೂರಿನ  ಪುಲಕೇಶಿನಗರ ಕ್ಷೇತ್ರ ಮಾತ್ರ, ಬೆಂಕಿಯಲ್ಲಿ ಮುಳುಗಿಹೋಗಿತ್ತು. ಒಂದು ಫೇಸ್ಬುಕ್ ಪೋಸ್ಟಿನ ವಿರುದ್ಧ ಶುರುವಾಗಿದ್ದ ಪ್ರತಿಭಟನೆ, ನೋಡನೋಡುತ್ತಲೇ ಹಿಂಸಾತ್ಮಕವಾಯ್ತು. ಅದರ ಪ್ರತಿಫಲವಾಗಿ, ಪುಲಕೇಶಿನಗರದ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಹಚ್ಚಿದ್ರು.ಬರೀ ಶಾಸಕರ ಮನೆಯಷ್ಟೇ ಅಲ್ಲ, ಅಲ್ಲಿದ್ದ ಪೋಲಿಸ್ ಠಾಣೆಗೂ ಬೆಂಕಿ ಇಟ್ಟಿದ್ರು. ಅವತ್ತು ಈ ಘಟನೆ ರಾಜ್ಯ ರಾಜಕೀಯದಲ್ಲೂ ದೊಡ್ಡ ಭೂಕಂಪ ಸೃಷ್ಟಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಿಡುವಂತೆ ತನ್ವೀರ್‌ ಸೇಠ್‌ ಪತ್ರ ಬರೆದಿದ್ದರು. ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್‌ ಹುಬ್ಬಳ್ಳಿ ಗಲಭೆ ಪ್ರಕರಣದ(Hubli riots case) ಅಮಾಯಕರನ್ನು ಬಿಡುವಂತೆ ಪತ್ರ ಬರೆದಿದ್ದಾರೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಕಲ್ಲು ಹೊಡೆದ್ರು..ಆವಾಜ್ ಹಾಕಿದ್ರು..ಪೊಲೀಸರಿಗೇ ಹೆದರಿಸಿದ್ರು: ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ನಿಜಕ್ಕೂ ಆಗಿದ್ದೇನು ?

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more