ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿ.ಕೆ.ಶಿವಕುಮಾರ್; ಏನಿದು 4 ಸಾಲಿನ ಬಂಡೆ ತಂತ್ರ?

ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿ.ಕೆ.ಶಿವಕುಮಾರ್; ಏನಿದು 4 ಸಾಲಿನ ಬಂಡೆ ತಂತ್ರ?

Published : Aug 23, 2025, 07:08 PM IST

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆಯನ್ನು ಉಲ್ಲೇಖಿಸಿ ಹೊಸ ರಾಜಕೀಯ ತಂತ್ರ ಪ್ರದರ್ಶಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಹಿಂದುತ್ವದ ಅಸ್ತ್ರವನ್ನು ಬಳಸುತ್ತಿರುವ ಅವರು, 'ಸಾಫ್ಟ್ ಹಿಂದುತ್ವ'ದ ಹಾದಿಯಲ್ಲಿ ಮುಂದುವರೆದಿದ್ದಾರೆ.

ಬೆಂಗಳೂರು (ಆ.23): ರಾಜ್ಯ ರಾಜಕಾರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರ ನಡೆಗಳು ತೀವ್ರ ಕುತೂಹಲ ಮೂಡಿಸಿವೆ. ಅದರಲ್ಲೂ ಸದನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಾರ್ಥನಾ ಗೀತೆಯಾದ 'ನಮಸ್ತೇ ಸದಾ ವತ್ಸಲೇ...' ಹಾಡಿನ ನಾಲ್ಕು ಸಾಲುಗಳನ್ನು ಉಲ್ಲೇಖಿಸಿ, ಡಿ.ಕೆ.ಶಿವಕುಮಾರ್ ವಿರೋಧ ಪಕ್ಷಗಳಿಗೆ ಕೌಂಟರ್ ನೀಡಿದ್ದು, ಇದು ಅವರ ಹೊಸ ರಾಜಕೀಯ ತಂತ್ರದ ಭಾಗವೆಂಬ ಚರ್ಚೆಗೆ ಕಾರಣವಾಗಿದೆ. ಇದು ಡಿ.ಕೆ.ಶಿವಕುಮಾರ್ 'ಸಾಫ್ಟ್ ಹಿಂದುತ್ವ'ದ ಹೊಸ ಅಧ್ಯಾಯದ ಆರಂಭವೇ ಎಂಬ ಪ್ರಶ್ನೆ ಮೂಡಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಹಿಂದುತ್ವದ ಹೋರಾಟ
ಪ್ರಸ್ತುತ ನಡೆಯುತ್ತಿರುವ ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಹಿಂದುತ್ವದ ಅಸ್ತ್ರವನ್ನು ಬಳಸುತ್ತಿದೆ. ಈ ಸವಾಲನ್ನು ಎದುರಿಸಲು ಕಾಂಗ್ರೆಸ್‌ನಿಂದ ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಹಿಂದುತ್ವದ ಅಸ್ತ್ರವನ್ನು ಹಿಡಿದಿದ್ದಾರೆ. ವಿರೋಧ ಪಕ್ಷಗಳು ಧಾರ್ಮಿಕ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವಾಗ, ಶಿವಕುಮಾರ್ 'ನಾನು ಹಿಂದೂ, ನಾನು ಕಾಂಗ್ರೆಸ್ಸಿಗ' ಎಂಬ ಹೇಳಿಕೆಯ ಮೂಲಕ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಸಾಫ್ಟ್ ಹಿಂದುತ್ವ'ದ ರಣತಂತ್ರ ಮತ್ತು ಗುರಿ

ಡಿ.ಕೆ.ಶಿವಕುಮಾರ್ ಅವರ 'ಸಾಫ್ಟ್ ಹಿಂದುತ್ವ'ದ ಹಾದಿ ಹೊಸದೇನಲ್ಲ. ಈ ಹಿಂದೆ ಕನಕಪುರದಲ್ಲೂ ಇಂತಹ ಹೆಜ್ಜೆ ಇಟ್ಟಿದ್ದ ಅವರು, ಹಿಂದುತ್ವದ ಪ್ರಮುಖ ಕಾರ್ಯಕ್ರಮಗಳು ಮತ್ತು ದೇವಾಲಯಗಳ ಭೇಟಿ ಮೂಲಕ ತಮ್ಮ ನಾಯಕತ್ವದ ಮೇಲೆ ಹಿಂದುತ್ವದ ಮುದ್ರೆಯೊತ್ತಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತದಿಂದ ಭಿನ್ನವಾದ ಈ ದಾರಿಯನ್ನು ಅವರು ಆಯ್ದುಕೊಂಡಿರುವುದು ಒಂದು ದೊಡ್ಡ ಗುರಿಯನ್ನು ಸೂಚಿಸುತ್ತದೆ.

ಈ ನಡೆಯು ಕಾಂಗ್ರೆಸ್‌ಗೆ ಹಿಂದುತ್ವದ ವಿಚಾರದಲ್ಲಿ ಹೊಸ ಶಕ್ತಿ ತುಂಬಲಿದೆ ಎಂಬುದು ಡಿ.ಕೆ.ಶಿ. ಅವರ ಆಶಯವಾಗಿದೆ. ಸಾಂಪ್ರದಾಯಿಕ ಕಾಂಗ್ರೆಸ್ ಮತಗಳ ಜೊತೆಗೆ ಹಿಂದೂ ಸಮುದಾಯದ ಒಂದು ವರ್ಗದ ಮತಗಳನ್ನು ಸೆಳೆಯುವ ಉದ್ದೇಶ ಇದರ ಹಿಂದಿದೆ ಎಂದು ವಿಶ್ಲೇಷಿಸಲಾಗಿದೆ. ವಿರೋಧ ಪಕ್ಷದ ನಾಯಕರು ಸೆಪ್ಟೆಂಬರ್ ಕ್ರಾಂತಿಯ ಬಗ್ಗೆ ಮಾತನಾಡಿದಾಗ, 'ಸಂಘ ಮಂತ್ರ'ದ ಮೂಲಕ ಡಿ.ಕೆ.ಶಿ. ಅವರು ನೀಡಿದ ಪ್ರತಿಕ್ರಿಯೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more