ಡಿಕೆ ಶಿವಕುಮಾರ್ ಅಳಿಯ ಅಮರ್ಥ್ಯರಿಂದ ಎಸ್.ಎಂ.ಕೃಷ್ಣ ಪಾರ್ಥಿವಕ್ಕೆ ಅಗ್ನಿ ಸ್ಪರ್ಶ; ಹೇಗೆ ನಡೆಯಲಿದೆ ಅಂತ್ಯಕ್ರಿಯೆ?

ಡಿಕೆ ಶಿವಕುಮಾರ್ ಅಳಿಯ ಅಮರ್ಥ್ಯರಿಂದ ಎಸ್.ಎಂ.ಕೃಷ್ಣ ಪಾರ್ಥಿವಕ್ಕೆ ಅಗ್ನಿ ಸ್ಪರ್ಶ; ಹೇಗೆ ನಡೆಯಲಿದೆ ಅಂತ್ಯಕ್ರಿಯೆ?

Published : Dec 11, 2024, 01:47 PM ISTUpdated : Dec 11, 2024, 01:50 PM IST

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯಲ್ಲಿ ಅವರ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ್ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ. ರೈತ ದೇವರಾಜು ಅವರು ಕೃಷ್ಣ ಅವರ ಚಿತೆಗಾಗಿ ತಾವು ಬೆಳೆದ ಶ್ರೀಗಂಧದ ಮರದ ತುಂಡನ್ನು ತಂದಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೃತದೇಹಕ್ಕೆ ಸ್ವತಃ ಅವರ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ್ ಅವರೇ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿಕುಮಾರ್ ಅವರ ಅಳಿಯನಾಗಿರುವ ಅಮರ್ಥ್ಯ ಸಿದ್ದಾರ್ಥ್ ಕಳೆದ ಕೆಲವು ವರ್ಷಗಳ ಹಿಂದೆ ತಮ್ಮ ತಂದೆ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ ಅವರ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಿದ್ದರು. ಇದೀಗ ಪುನಃ ತಾತ ಕೃಷ್ಣ ಅವರ ದೇಹಕ್ಕೆ ಅಗ್ನಿ ಸ್ಪರ್ಶ್ ಮಾಡಲಿದ್ದಾರೆ ಎಂದು ಕೃಷ್ಣ ಅವರ ಸಹೋದರನ ಪುತ್ರ ಗುರುಚರಣ್ ಮಾಹಿತಿ ನೀಡಿದರು.

ಹೇಗೆ ನಡೆಯಲಿದೆ ಅಂತ್ಯಕ್ರಿಯೆ: ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಗಾಗಿ ರೈತ‌ ದೇವರಾಜು ಅವರು ಶ್ರೀಗಂಧದ ತುಂಡು ತಂದಿದ್ದಾರೆ. ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದ ದೇವರಾಜು ಅವರು ತಾನೇ ಬೆಳೆದ ಶ್ರೀಗಂಧದ ಮರದ ತುಂಡು ತಂದು ಚಿತೆಗೆ ಹಾಕಿ ಸುಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಕಾರಣ ರಾಜ್ಯದಲ್ಲಿ ರೈತರು ಕೂಡ ಶ್ರೀಗಂಧ ಬೆಳೆಯನ್ನು ಬೆಳೆಯಲು ಅವಕಾಶ ನೀಡಿದ್ದು ಎಸ್.ಎಂ.ಕೃಷ್ಣ ಅವರೇ. ಕೃಷ್ಣ ಅವರ ಯೋಜನೆಯಿಂದ ನಾನು ಗಂಧ ಬೆಳೆದಿದ್ದೆ. ನಾನು ಬೆಳೆದ ಗಂಧವನ್ನು ಅವರ ಚಿತೆಗೆ ಸಮರ್ಪಣೆ ಮಾಡಲು ಬಂದಿದ್ದೇನೆ. ಎಸ್.ಎಂ. ಕೃಷ್ಣ ಅವರು ನನ್ನ ತಂದೆಯೊಂದಿಗೆ ಉತ್ತಮ ಒಡನಾಟ ಹೊಂದಿದ್ದರು ಎಂದು ರೈತ ದೇವರಾಜು ಹೇಳಿದರು. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more