ಡಿಕೆ ಶಿವಕುಮಾರ್ ಅಳಿಯ ಅಮರ್ಥ್ಯರಿಂದ ಎಸ್.ಎಂ.ಕೃಷ್ಣ ಪಾರ್ಥಿವಕ್ಕೆ ಅಗ್ನಿ ಸ್ಪರ್ಶ; ಹೇಗೆ ನಡೆಯಲಿದೆ ಅಂತ್ಯಕ್ರಿಯೆ?

ಡಿಕೆ ಶಿವಕುಮಾರ್ ಅಳಿಯ ಅಮರ್ಥ್ಯರಿಂದ ಎಸ್.ಎಂ.ಕೃಷ್ಣ ಪಾರ್ಥಿವಕ್ಕೆ ಅಗ್ನಿ ಸ್ಪರ್ಶ; ಹೇಗೆ ನಡೆಯಲಿದೆ ಅಂತ್ಯಕ್ರಿಯೆ?

Published : Dec 11, 2024, 01:47 PM ISTUpdated : Dec 11, 2024, 01:50 PM IST

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯಲ್ಲಿ ಅವರ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ್ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ. ರೈತ ದೇವರಾಜು ಅವರು ಕೃಷ್ಣ ಅವರ ಚಿತೆಗಾಗಿ ತಾವು ಬೆಳೆದ ಶ್ರೀಗಂಧದ ಮರದ ತುಂಡನ್ನು ತಂದಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೃತದೇಹಕ್ಕೆ ಸ್ವತಃ ಅವರ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ್ ಅವರೇ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿಕುಮಾರ್ ಅವರ ಅಳಿಯನಾಗಿರುವ ಅಮರ್ಥ್ಯ ಸಿದ್ದಾರ್ಥ್ ಕಳೆದ ಕೆಲವು ವರ್ಷಗಳ ಹಿಂದೆ ತಮ್ಮ ತಂದೆ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ ಅವರ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಿದ್ದರು. ಇದೀಗ ಪುನಃ ತಾತ ಕೃಷ್ಣ ಅವರ ದೇಹಕ್ಕೆ ಅಗ್ನಿ ಸ್ಪರ್ಶ್ ಮಾಡಲಿದ್ದಾರೆ ಎಂದು ಕೃಷ್ಣ ಅವರ ಸಹೋದರನ ಪುತ್ರ ಗುರುಚರಣ್ ಮಾಹಿತಿ ನೀಡಿದರು.

ಹೇಗೆ ನಡೆಯಲಿದೆ ಅಂತ್ಯಕ್ರಿಯೆ: ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಗಾಗಿ ರೈತ‌ ದೇವರಾಜು ಅವರು ಶ್ರೀಗಂಧದ ತುಂಡು ತಂದಿದ್ದಾರೆ. ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದ ದೇವರಾಜು ಅವರು ತಾನೇ ಬೆಳೆದ ಶ್ರೀಗಂಧದ ಮರದ ತುಂಡು ತಂದು ಚಿತೆಗೆ ಹಾಕಿ ಸುಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಕಾರಣ ರಾಜ್ಯದಲ್ಲಿ ರೈತರು ಕೂಡ ಶ್ರೀಗಂಧ ಬೆಳೆಯನ್ನು ಬೆಳೆಯಲು ಅವಕಾಶ ನೀಡಿದ್ದು ಎಸ್.ಎಂ.ಕೃಷ್ಣ ಅವರೇ. ಕೃಷ್ಣ ಅವರ ಯೋಜನೆಯಿಂದ ನಾನು ಗಂಧ ಬೆಳೆದಿದ್ದೆ. ನಾನು ಬೆಳೆದ ಗಂಧವನ್ನು ಅವರ ಚಿತೆಗೆ ಸಮರ್ಪಣೆ ಮಾಡಲು ಬಂದಿದ್ದೇನೆ. ಎಸ್.ಎಂ. ಕೃಷ್ಣ ಅವರು ನನ್ನ ತಂದೆಯೊಂದಿಗೆ ಉತ್ತಮ ಒಡನಾಟ ಹೊಂದಿದ್ದರು ಎಂದು ರೈತ ದೇವರಾಜು ಹೇಳಿದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more