ಗಾಯಾಳುಗಳು ಆಸ್ಪತ್ರೆಯಲ್ಲಿ: ವೈದ್ಯರ ರಿಯಾಕ್ಷನ್!

Mar 19, 2019, 7:52 PM IST

ಧಾರವಾಡ(ಮಾ.19): ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಓರ್ವ  ಸಾವನ್ನಪ್ಪಿದ್ದು, 40 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 5 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಕಟ್ಟಡದಲ್ಲಿದ್ದವರು ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ಜಿಲ್ಲಾಸ್ಪತ್ರೆಯ ವೈದ್ಯ ಡಾ. ವಿಜಯ್ ವಿಠ್ಹಲ್ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...