ಉತ್ತರ ಕನ್ನಡ: 5 ಸಾವಿರಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದಾಗುವ ಲಿಸ್ಟ್‌ನಲ್ಲಿ

ಉತ್ತರ ಕನ್ನಡ: 5 ಸಾವಿರಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದಾಗುವ ಲಿಸ್ಟ್‌ನಲ್ಲಿ

Suvarna News   | Asianet News
Published : Oct 01, 2021, 05:15 PM IST

 ಉತ್ತರಕನ್ನಡ ಜಿಲ್ಲೆಯಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಬಿರುಸುಗೊಂಡಿದೆ. 

ಉತ್ತರಕನ್ನಡ (ಅ. 01): ಜಿಲ್ಲೆಯಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಬಿರುಸುಗೊಂಡಿದೆ. ಅರ್ಹರಿಗೆ ಸರಿಯಾಗಿ ಪಡಿತರ ಸೌಲಭ್ಯ ದೊರೆಯಬೇಕೆಂಬ ನಿಟ್ಟಿನಲ್ಲಿ ಸರಕಾರ ಕೈಗೊಂಡಿರುವ ಈ ಕ್ರಮದಿಂದ ಜಿಲ್ಲೆಯಲ್ಲಿ ಈಗಾಗಲೇ ಐದು ಸಾವಿರಕ್ಕೂ ಮಿಕ್ಕಿ ಬಿಪಿಎಲ್ ಕಾರ್ಡ್ ರದ್ದಾಗುವ ಲಿಸ್ಟ್‌ನಲ್ಲಿದೆ. ಸರಕಾರಿ ಸಿಬ್ಬಂದಿ, ಆಸ್ತಿ-ಪಾಸ್ತಿ ಹೊಂದಿರುವವರು, ಖಾಸಗಿ ಸಂಸ್ಥೆಗಳಲ್ಲಿ ಉತ್ತಮ ವೇತನ ಹೊಂದಿರುವವರು, ತೆರಿಗೆ ಪಾವತಿ ಮುಂತಾದ ಆಧಾರದಡಿ ಬಿಪಿಎಲ್ ಕಾರ್ಡ್ ರದ್ದು ಮಾಡಿ ಅವರನ್ನು ಎಪಿಎಲ್ ಕಾರ್ಡ್ ಲಿಸ್ಟ್‌ನಲ್ಲಿ ಸೇರಿಸಲಾಗುತ್ತಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಮ ಹೆಬ್ಬಾರ್, ಹೊಸ ಪಡಿತರ ಚೀಟಿಗಳು ಆಗಿಲ್ಲ. ಅನರ್ಹರಿಗೆ ಕಾರ್ಡ್‌ಗಳನ್ನು ಹಿಂತಿರುಗಿಸಲು ಅವಧಿ ನೀಡಲಾಗಿತ್ತು. ರಾಜ್ಯದಲ್ಲಿ ಸುಮಾರು 7 ಲಕ್ಷ ಪಡಿತರ ಕಾರ್ಡ್‌ಗಳನ್ನು ಹಸ್ತಾಂತರಿಸಿದ್ದಾರೆ ಎಂದಿದ್ದಾರೆ. ಈ ನಡುವೆ ಯಾವುದೇ ಅರ್ಹ ವ್ಯಕ್ತಿಗಳ ಪಡಿತರ ಕಾರ್ಡ್ ರದ್ದಾಗದಂತೆ ಹಾಗೂ ದೂರು ನೀಡಿದಲ್ಲಿ ಮತ್ತೆ ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳು ಆಶ್ವಾಸನೆ ನೀಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!