ಉತ್ತರ ಕನ್ನಡ: 5 ಸಾವಿರಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದಾಗುವ ಲಿಸ್ಟ್‌ನಲ್ಲಿ

ಉತ್ತರ ಕನ್ನಡ: 5 ಸಾವಿರಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದಾಗುವ ಲಿಸ್ಟ್‌ನಲ್ಲಿ

Suvarna News   | Asianet News
Published : Oct 01, 2021, 05:15 PM IST

 ಉತ್ತರಕನ್ನಡ ಜಿಲ್ಲೆಯಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಬಿರುಸುಗೊಂಡಿದೆ. 

ಉತ್ತರಕನ್ನಡ (ಅ. 01): ಜಿಲ್ಲೆಯಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಬಿರುಸುಗೊಂಡಿದೆ. ಅರ್ಹರಿಗೆ ಸರಿಯಾಗಿ ಪಡಿತರ ಸೌಲಭ್ಯ ದೊರೆಯಬೇಕೆಂಬ ನಿಟ್ಟಿನಲ್ಲಿ ಸರಕಾರ ಕೈಗೊಂಡಿರುವ ಈ ಕ್ರಮದಿಂದ ಜಿಲ್ಲೆಯಲ್ಲಿ ಈಗಾಗಲೇ ಐದು ಸಾವಿರಕ್ಕೂ ಮಿಕ್ಕಿ ಬಿಪಿಎಲ್ ಕಾರ್ಡ್ ರದ್ದಾಗುವ ಲಿಸ್ಟ್‌ನಲ್ಲಿದೆ. ಸರಕಾರಿ ಸಿಬ್ಬಂದಿ, ಆಸ್ತಿ-ಪಾಸ್ತಿ ಹೊಂದಿರುವವರು, ಖಾಸಗಿ ಸಂಸ್ಥೆಗಳಲ್ಲಿ ಉತ್ತಮ ವೇತನ ಹೊಂದಿರುವವರು, ತೆರಿಗೆ ಪಾವತಿ ಮುಂತಾದ ಆಧಾರದಡಿ ಬಿಪಿಎಲ್ ಕಾರ್ಡ್ ರದ್ದು ಮಾಡಿ ಅವರನ್ನು ಎಪಿಎಲ್ ಕಾರ್ಡ್ ಲಿಸ್ಟ್‌ನಲ್ಲಿ ಸೇರಿಸಲಾಗುತ್ತಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಮ ಹೆಬ್ಬಾರ್, ಹೊಸ ಪಡಿತರ ಚೀಟಿಗಳು ಆಗಿಲ್ಲ. ಅನರ್ಹರಿಗೆ ಕಾರ್ಡ್‌ಗಳನ್ನು ಹಿಂತಿರುಗಿಸಲು ಅವಧಿ ನೀಡಲಾಗಿತ್ತು. ರಾಜ್ಯದಲ್ಲಿ ಸುಮಾರು 7 ಲಕ್ಷ ಪಡಿತರ ಕಾರ್ಡ್‌ಗಳನ್ನು ಹಸ್ತಾಂತರಿಸಿದ್ದಾರೆ ಎಂದಿದ್ದಾರೆ. ಈ ನಡುವೆ ಯಾವುದೇ ಅರ್ಹ ವ್ಯಕ್ತಿಗಳ ಪಡಿತರ ಕಾರ್ಡ್ ರದ್ದಾಗದಂತೆ ಹಾಗೂ ದೂರು ನೀಡಿದಲ್ಲಿ ಮತ್ತೆ ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳು ಆಶ್ವಾಸನೆ ನೀಡಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!