ಉತ್ತರ ಕನ್ನಡ: 5 ಸಾವಿರಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದಾಗುವ ಲಿಸ್ಟ್‌ನಲ್ಲಿ

ಉತ್ತರ ಕನ್ನಡ: 5 ಸಾವಿರಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದಾಗುವ ಲಿಸ್ಟ್‌ನಲ್ಲಿ

Suvarna News   | Asianet News
Published : Oct 01, 2021, 05:15 PM IST

 ಉತ್ತರಕನ್ನಡ ಜಿಲ್ಲೆಯಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಬಿರುಸುಗೊಂಡಿದೆ. 

ಉತ್ತರಕನ್ನಡ (ಅ. 01): ಜಿಲ್ಲೆಯಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಬಿರುಸುಗೊಂಡಿದೆ. ಅರ್ಹರಿಗೆ ಸರಿಯಾಗಿ ಪಡಿತರ ಸೌಲಭ್ಯ ದೊರೆಯಬೇಕೆಂಬ ನಿಟ್ಟಿನಲ್ಲಿ ಸರಕಾರ ಕೈಗೊಂಡಿರುವ ಈ ಕ್ರಮದಿಂದ ಜಿಲ್ಲೆಯಲ್ಲಿ ಈಗಾಗಲೇ ಐದು ಸಾವಿರಕ್ಕೂ ಮಿಕ್ಕಿ ಬಿಪಿಎಲ್ ಕಾರ್ಡ್ ರದ್ದಾಗುವ ಲಿಸ್ಟ್‌ನಲ್ಲಿದೆ. ಸರಕಾರಿ ಸಿಬ್ಬಂದಿ, ಆಸ್ತಿ-ಪಾಸ್ತಿ ಹೊಂದಿರುವವರು, ಖಾಸಗಿ ಸಂಸ್ಥೆಗಳಲ್ಲಿ ಉತ್ತಮ ವೇತನ ಹೊಂದಿರುವವರು, ತೆರಿಗೆ ಪಾವತಿ ಮುಂತಾದ ಆಧಾರದಡಿ ಬಿಪಿಎಲ್ ಕಾರ್ಡ್ ರದ್ದು ಮಾಡಿ ಅವರನ್ನು ಎಪಿಎಲ್ ಕಾರ್ಡ್ ಲಿಸ್ಟ್‌ನಲ್ಲಿ ಸೇರಿಸಲಾಗುತ್ತಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಮ ಹೆಬ್ಬಾರ್, ಹೊಸ ಪಡಿತರ ಚೀಟಿಗಳು ಆಗಿಲ್ಲ. ಅನರ್ಹರಿಗೆ ಕಾರ್ಡ್‌ಗಳನ್ನು ಹಿಂತಿರುಗಿಸಲು ಅವಧಿ ನೀಡಲಾಗಿತ್ತು. ರಾಜ್ಯದಲ್ಲಿ ಸುಮಾರು 7 ಲಕ್ಷ ಪಡಿತರ ಕಾರ್ಡ್‌ಗಳನ್ನು ಹಸ್ತಾಂತರಿಸಿದ್ದಾರೆ ಎಂದಿದ್ದಾರೆ. ಈ ನಡುವೆ ಯಾವುದೇ ಅರ್ಹ ವ್ಯಕ್ತಿಗಳ ಪಡಿತರ ಕಾರ್ಡ್ ರದ್ದಾಗದಂತೆ ಹಾಗೂ ದೂರು ನೀಡಿದಲ್ಲಿ ಮತ್ತೆ ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳು ಆಶ್ವಾಸನೆ ನೀಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!