ಮಂಡ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ, ಕೋವಿಡ್ ಕೇರ್ ಸೆಂಟರ್‌ಗೆ ಡಿಸಿಎಂ ಭೇಟಿ, ಪರಿಶೀಲನೆ

May 20, 2021, 5:28 PM IST

ಬೆಂಗಳೂರು (ಮೇ. 20): ಮಂಡ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನಲೆಯಲ್ಲಿ, ಡಿಸಿಎಂ ಅಶ್ವಥ್ ನಾರಾಯಣ್ ಮದ್ದೂರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾರ್ಡ್‌ನಲ್ಲಿ ಆಮ್ಲಜನಕದ ವ್ಯವಸ್ಥೆ, ಚಿಕಿತ್ಸೆ ವಿಧಾನ, ಮೂಲಸೌಕರ್ಯ ಮುಂತಾದವುಗಳನ್ನು ವೀಕ್ಷಿಸಿದರು.

ಕೊರೊನಾ ಸೋಂಕಿತರು ಮಾತ್ರವಲ್ಲ, ಬ್ಲ್ಯಾಕ್ ಫಂಗಸ್ ಪೀಡಿತರಿಗೂ ಸಿಗುತ್ತಿಲ್ಲ ಬೆಡ್..!

ವಾರ್ಡ್‌ನಲ್ಲಿ ಸೋಂಕಿತರ ಅಟೆಂಡರ್‌ಗಳು ಇದ್ದಿದ್ದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ ಡಿಸಿಎಂ, ಯಾವುದೇ ಕಾರಣಕ್ಕೂ ಸೋಂಕಿತರಲ್ಲದವರನ್ನು ವಾರ್ಡ್‌ಗೆ ಬಿಟ್ಟುಕೊಳ್ಳಬಾರದು ಎಂದು ಜಿಲ್ಲಾ ವೈದಾಧಿಕಾರಿಗೆ ತಾಕೀತು ಮಾಡಿದರು.