PUC ಪರೀಕ್ಷೆ ಗೊಂದಲದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು..

PUC ಪರೀಕ್ಷೆ ಗೊಂದಲದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು..

Suvarna News   | Asianet News
Published : Jun 18, 2020, 05:10 PM IST

ರಾಜ್ಯದಲ್ಲಿ ಒಂದುಸಾವಿರದ ಹದಿನಾರು ಪರೀಕ್ಷಾ ಕೇಂದ್ರಗಳಿವೆ. ಈ ಪೈಕಿ ಬಹುತೇಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ತುಂಬಾ ಅಚ್ಚುಕಟ್ಟಾಗಿ ನಡೆದಿದೆ. ಪೋಷಕರು ಈ ರೀತಿಯ ಪರೀಕ್ಷೆ ಆಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು(ಜೂ.18): ರಾಜ್ಯಾದ್ಯಂತ ಅಚ್ಚುಕಟ್ಟಾಗಿ ಪಿಯುಸಿ ಪರೀಕ್ಷೆ ಮುಗಿದಿದೆ. ಎಂಟರಿಂದ ಹತ್ತು ಕಾಲೇಜಿನಲ್ಲಿ ಸ್ವಲ್ಪ ಅವ್ಯವಸ್ಥೆಯಾಗಿದ್ದು ನಿಜ, ಉಳಿದಂತೆ ಎಲ್ಲಾ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಒಂದುಸಾವಿರದ ಹದಿನಾರು ಪರೀಕ್ಷಾ ಕೇಂದ್ರಗಳಿವೆ. ಈ ಪೈಕಿ ಬಹುತೇಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ತುಂಬಾ ಅಚ್ಚುಕಟ್ಟಾಗಿ ನಡೆದಿದೆ. ಪೋಷಕರು ಈ ರೀತಿಯ ಪರೀಕ್ಷೆ ಆಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

6 ಲಕ್ಷ ಮಕ್ಕಳು ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಎಂಟುವರೆ ಲಕ್ಷ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯಲಿದ್ದಾರೆ. SSLC ಪರೀಕ್ಷೆಗಾಗಿ ಮೂರು ಸಾವಿರ ಪರೀಕ್ಷಾ ಕೇಂದ್ರಗಳಿವೆ. ಹಾಗಾಗಿ ವಿದ್ಯಾರ್ಥಿಗಳು ಮತ್ತಷ್ಟು ಹಂಚಿಹೋಗಲಿದ್ದಾರೆ. ಹೀಗಾಗಿ ಜೂನ್ 25ರಿಂದ ಆರಂಭವಾಗಲಿರುವ ಹತ್ತನೇ ತರಗತಿ ಪರೀಕ್ಷೆ ಇನ್ನಷ್ಟು ಎಚ್ಚರಿಕೆಯಿಂದ ನಡೆಸಲಿದ್ದೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!