News Hour: 2023ರ ಚುನಾವಣೆಗೆ ಅನಿವಾರ್ಯವಾದ್ರಾ ಬಿಎಸ್‌ ಯಡಿಯೂರಪ್ಪ!

News Hour: 2023ರ ಚುನಾವಣೆಗೆ ಅನಿವಾರ್ಯವಾದ್ರಾ ಬಿಎಸ್‌ ಯಡಿಯೂರಪ್ಪ!

Published : Aug 17, 2022, 11:05 PM IST

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕ ರಾಜಕಾರಣದ ದೊಡ್ಡ ಮುಖ ಬಿಎಸ್‌ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಿದೆ. ಈ ಸುದ್ದಿ ಹೊರಬಿದ್ದ ಬೆನ್ನಲ್ಲಿಯೇ ರಾಜ್ಯ ಬಿಜೆಪಿಗೆ ಬಲ ಸಿಕ್ಕಂತಾಗಿದೆ. ಸಂಸದೀಯ ಮಂಡಳಿ ಮಾತ್ರವಲ್ಲದೆ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲೂ ಯಡಿಯೂರಪ್ಪ ಸ್ಥಾನ ಪಡೆದಿದ್ದಾರೆ.

ಬೆಂಗಳೂರು (ಆ. 17): ಕರ್ನಾಟಕದಲ್ಲಿ ಬಿಜೆಪಿ ಪಾಲಿನ ಅತಿದೊಡ್ಡ ನಾಯಕ ಬಿಎಸ್ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್‌ ಮಹತ್ವದ ಸ್ಥಾನ ನೀಡಿದೆ. ದೇಶದಲ್ಲಿ ಬಿಜೆಪಿಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮಂಡಳಿ ಆಗಿರುವ ಸಂಸದೀಯ ಮಂಡಳಿಯ 11 ಮಂದಿ ಸದಸ್ಯರಲ್ಲಿ ಬಿಎಸ್‌ ಯಡಿಯೂರಪ್ಪ ಕೂಡ ಸ್ಥಾನ ಪಡೆದಿದ್ದಾರೆ. ಮಾಜಿ ಮುಖ್ಯಮಂತ್ರಿಯೊಬ್ಬರು ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದಿರುವುದು ಇದೇ ಮೊದಲು.

ಬಿಎಸ್‌ವೈ ಅವರಿಗೆ ಈ ಸ್ಥಾನ ನೀಡುವುದರೊಂದಿಗೆ 2023ರ ರಾಜ್ಯ ವಿಭಾನಸಭೆ ಚುನಾವಣೆಗೆ ಬಿಜೆಪಿ ಕೂಡ ಸಿದ್ಧವಾಗಿದೆ. ಮುಂಬರುವ ಚುನಾವಣೆಯ ನಿಟ್ಟಿನಲ್ಲಿಯೇ ಈ ಮಹತ್ವದ ನಿರ್ಧಾರ ಮಾಡಲಾಗಿದ್ದು, ಲಿಂಗಾಯತ ಮತಗಳು ಕೈತಪ್ಪಿ ಹೋಗದಂತೆ ಬಿಜೆಪಿ ಎಚ್ಚರ ವಹಿಸಿದೆ. ಬಿಎಸ್‌ವೈ ಅವರು ಮೊದಲ ಬಾರಿ ಸಂಸದೀಯ ಮಂಡಳಿಯಲ್ಲಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಹೈಕಮಾಂಡ್‌ ದೊಡ್ಡ ಜವಾಬ್ದಾರಿ ಕೊಟ್ಟಿದೆ, ಸ್ಥಾನಮಾನ ನಿರೀಕ್ಷಿಸಿರಲಿಲ್ಲ: ಬಿಎಸ್‌ವೈ

ಇನ್ನು ನಿತಿನ್‌ ಗಡ್ಕರಿ, ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಕೊಕ್‌ ನೀಡಲಾಗಿದೆ.  ಕರ್ನಾಟಕದಿಂದ ಬಿ.ಎಲ್ ಸಂತೋಷ್ ಅವರಿಗೂ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ. ಇದು ಘೋಷಣೆ ಆಗುತ್ತಿದ್ದಂತೆ ಬಿಎಸ್‌ವೈ ನಿವಾಸದಲ್ಲಿ ಸಿಹಿ ಹಂಚಿ ಬೆಂಬಲಿಗರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಬಿಎಸ್‌ವೈ ಕೂಡ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ 140 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more