News Hour: 2023ರ ಚುನಾವಣೆಗೆ ಅನಿವಾರ್ಯವಾದ್ರಾ ಬಿಎಸ್‌ ಯಡಿಯೂರಪ್ಪ!

News Hour: 2023ರ ಚುನಾವಣೆಗೆ ಅನಿವಾರ್ಯವಾದ್ರಾ ಬಿಎಸ್‌ ಯಡಿಯೂರಪ್ಪ!

Published : Aug 17, 2022, 11:05 PM IST

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕ ರಾಜಕಾರಣದ ದೊಡ್ಡ ಮುಖ ಬಿಎಸ್‌ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಿದೆ. ಈ ಸುದ್ದಿ ಹೊರಬಿದ್ದ ಬೆನ್ನಲ್ಲಿಯೇ ರಾಜ್ಯ ಬಿಜೆಪಿಗೆ ಬಲ ಸಿಕ್ಕಂತಾಗಿದೆ. ಸಂಸದೀಯ ಮಂಡಳಿ ಮಾತ್ರವಲ್ಲದೆ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲೂ ಯಡಿಯೂರಪ್ಪ ಸ್ಥಾನ ಪಡೆದಿದ್ದಾರೆ.

ಬೆಂಗಳೂರು (ಆ. 17): ಕರ್ನಾಟಕದಲ್ಲಿ ಬಿಜೆಪಿ ಪಾಲಿನ ಅತಿದೊಡ್ಡ ನಾಯಕ ಬಿಎಸ್ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್‌ ಮಹತ್ವದ ಸ್ಥಾನ ನೀಡಿದೆ. ದೇಶದಲ್ಲಿ ಬಿಜೆಪಿಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮಂಡಳಿ ಆಗಿರುವ ಸಂಸದೀಯ ಮಂಡಳಿಯ 11 ಮಂದಿ ಸದಸ್ಯರಲ್ಲಿ ಬಿಎಸ್‌ ಯಡಿಯೂರಪ್ಪ ಕೂಡ ಸ್ಥಾನ ಪಡೆದಿದ್ದಾರೆ. ಮಾಜಿ ಮುಖ್ಯಮಂತ್ರಿಯೊಬ್ಬರು ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದಿರುವುದು ಇದೇ ಮೊದಲು.

ಬಿಎಸ್‌ವೈ ಅವರಿಗೆ ಈ ಸ್ಥಾನ ನೀಡುವುದರೊಂದಿಗೆ 2023ರ ರಾಜ್ಯ ವಿಭಾನಸಭೆ ಚುನಾವಣೆಗೆ ಬಿಜೆಪಿ ಕೂಡ ಸಿದ್ಧವಾಗಿದೆ. ಮುಂಬರುವ ಚುನಾವಣೆಯ ನಿಟ್ಟಿನಲ್ಲಿಯೇ ಈ ಮಹತ್ವದ ನಿರ್ಧಾರ ಮಾಡಲಾಗಿದ್ದು, ಲಿಂಗಾಯತ ಮತಗಳು ಕೈತಪ್ಪಿ ಹೋಗದಂತೆ ಬಿಜೆಪಿ ಎಚ್ಚರ ವಹಿಸಿದೆ. ಬಿಎಸ್‌ವೈ ಅವರು ಮೊದಲ ಬಾರಿ ಸಂಸದೀಯ ಮಂಡಳಿಯಲ್ಲಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಹೈಕಮಾಂಡ್‌ ದೊಡ್ಡ ಜವಾಬ್ದಾರಿ ಕೊಟ್ಟಿದೆ, ಸ್ಥಾನಮಾನ ನಿರೀಕ್ಷಿಸಿರಲಿಲ್ಲ: ಬಿಎಸ್‌ವೈ

ಇನ್ನು ನಿತಿನ್‌ ಗಡ್ಕರಿ, ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಕೊಕ್‌ ನೀಡಲಾಗಿದೆ.  ಕರ್ನಾಟಕದಿಂದ ಬಿ.ಎಲ್ ಸಂತೋಷ್ ಅವರಿಗೂ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ. ಇದು ಘೋಷಣೆ ಆಗುತ್ತಿದ್ದಂತೆ ಬಿಎಸ್‌ವೈ ನಿವಾಸದಲ್ಲಿ ಸಿಹಿ ಹಂಚಿ ಬೆಂಬಲಿಗರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಬಿಎಸ್‌ವೈ ಕೂಡ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ 140 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more