ರಾಜ್ಯ ರಾಜಧಾನಿಯಲ್ಲಿ ಅನ್ನದಾತರ ಕಹಳೆ.. ರೈತ ವಿರೋಧಿ ಕಾಯ್ದೆಗಳ ರದ್ದಿಗೆ ಆಗ್ರಹ

ರಾಜ್ಯ ರಾಜಧಾನಿಯಲ್ಲಿ ಅನ್ನದಾತರ ಕಹಳೆ.. ರೈತ ವಿರೋಧಿ ಕಾಯ್ದೆಗಳ ರದ್ದಿಗೆ ಆಗ್ರಹ

Published : Nov 28, 2023, 10:01 AM IST

ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರೋಧಿಸಿ ಬೆಂಗಳೂರಿನಲ್ಲಿ ರೈತರು ಹೋರಾಟ ನಡೆಸಿದ್ರು. 21 ಬೇಡಿಕೆ ಇಟ್ಟ ಮಣ್ಣಿನ ಮಕ್ಕಳಿಗೆ 58 ವಿವಿಧ ಸಂಘಟನೆಗಳು ಸಾಥ್ ನೀಡಿದ್ವು. ರಾಜ್ಯಾ ರಾಜಧಾನಿಯಲ್ಲಿ ರಣಕಹಳೆ ಮೊಳಗಿಸಿದ ಅನ್ನದಾತರು ಕೇಂದ್ರ,ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದ್ರು.
 

ಬೆಂಗಳೂರಿನಲ್ಲಿ(Bengaluru) ಮತ್ತೊಮ್ಮೆ ರೈತರು ಹೋರಾಟಕ್ಕೆ ಇಳದಿದ್ದಾರೆ. ರೈತ ವಿರೋಧಿ ಕಾಯ್ದೆಗಳ ರದ್ದು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಭಾನುವಾರದಿಂದ ಫ್ರೀಡಂಪಾರ್ಕ್‌ನಲ್ಲಿ(Freedom Park) ಹೋರಾಟ ನಡೆಸುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಜೊತೆಗೆ ವಿವಿಧ ಕಾರ್ಮಿಕ ಸಂಘಟನೆಗಳು ಜಂಟಿಯಾಗಗಿ ಹೋರಾಟಕ್ಕಿಳಿದಿವೆ. ಸರ್ಕಾರ ಧಿಕ್ಕಾರ ಕೂಗಿದ ರೈತರು(Farmers) ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ರು. ಅನ್ನದಾತರ ಹೋರಾಟಕ್ಕೆ ಆಶಾಕಾರ್ಯಕರ್ತೆಯರು ಸೇರಿದಂತೆ ವಿವಿಧ 58 ಸಂಘಟನೆಗಳು ಸಾಥ್ ನೀಡಿದ್ವು. ಕೇಂದ್ರ ಸರ್ಕಾರದ(Central government) ನೀತಿಗಳಿಂದ ತೊಂದರೆಗೊಳಗಾಗಿರುವ ವಿವಿಧ ಸಮುದಾಯಗಳು, ನಮ್ಮ ಸಮಸ್ಯೆಗಳನ್ನು ಬಗೆಹರಿಸಿ ಎಂದು 21 ಬೇಡಿಕೆ ಪಟ್ಟಿ ಇಟ್ಟಿದ್ದಾರೆ. ವಿರೋಧ ಮಧ್ಯೆ ಜಾರಿ ಮಾಡಿರೋ APMC ಕಾಯ್ದೆ ರದ್ದು ಮಾಡಬೇಕು. ಫಸಲ್ ಭಿಮಾ ಯೋಜನೆಯಲ್ಲಿನ ವಂಚನೆ ಸರಿಪಡಿಸಬೇಕು. ರಾಜ್ಯ ಭೂ ಸುಧಾರಣಾ ತಿದ್ದುಪಡಸಿ ಕಾಯ್ದೆ ರದ್ದು ಮಾಡಬೇಕು ಅನ್ನೋದು ಪ್ರಮುಖ ಬೇಡಿಕೆಗಳು. ಅಲ್ಲದೇ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಶಾಸನ ಮಾಡಬೇಕು, ಬಿತ್ತನೆ ಬೀಜ, ರಸಗೊಬ್ಬರ, ಕರೆಂಟ್‌ ಮೇಲೆ ಸಬ್ಸಿಡಿ ಹೆಚ್ಚಿಸುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಕಾರ್ಮಿಕರ ಕೆಲಸ ಅವಧಿ 8ರಿಂದ 12 ಗಂಟೆ ಏರಿಸುವದನ್ನ ಕೈಬಿಡುವಂತೆಯೂ ಆಗ್ರಹಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಕನಿಷ್ಟ ವೇತನ ಮಾಸಿಕ 26,000 ರೂ ನಿಗದಿ ಮಾಡಬೇಕು, ಬಗ‌ರ್ ಹುಕುಂ ರೈತರಿಗೆ ಕೂಡಲೇ ಹಕ್ಕುಪತ್ರ ನೀಡಬೇಕು. ರೈತರ ಮೇಲೆ‌ಹಾಕಿರುವ ಕೇಸ್‌ಗಳನ್ನ ವಜಾ ಮಾಡಬೇಕು ಅನ್ನೋ ಬೇಡಿಕೆ ಜೊತೆಗೆ ಆಶಾ ಕಾರ್ಯಕರ್ತೆಯರನ್ನ ಕಾರ್ಮಿಕರೆಂದು ಪರಿಗಣಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  3 ದಿನದಲ್ಲಿ ಸಿನಿಮಾ 6 ವರೆ ಕೋಟಿ ಕಲೆಕ್ಷನ್! ಇದು ರೆಬೆಲ್ ರೆಕಾರ್ಡ್ಸ್!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more