ರಾಜ್ಯ ರಾಜಧಾನಿಯಲ್ಲಿ ಅನ್ನದಾತರ ಕಹಳೆ.. ರೈತ ವಿರೋಧಿ ಕಾಯ್ದೆಗಳ ರದ್ದಿಗೆ ಆಗ್ರಹ

ರಾಜ್ಯ ರಾಜಧಾನಿಯಲ್ಲಿ ಅನ್ನದಾತರ ಕಹಳೆ.. ರೈತ ವಿರೋಧಿ ಕಾಯ್ದೆಗಳ ರದ್ದಿಗೆ ಆಗ್ರಹ

Published : Nov 28, 2023, 10:01 AM IST

ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರೋಧಿಸಿ ಬೆಂಗಳೂರಿನಲ್ಲಿ ರೈತರು ಹೋರಾಟ ನಡೆಸಿದ್ರು. 21 ಬೇಡಿಕೆ ಇಟ್ಟ ಮಣ್ಣಿನ ಮಕ್ಕಳಿಗೆ 58 ವಿವಿಧ ಸಂಘಟನೆಗಳು ಸಾಥ್ ನೀಡಿದ್ವು. ರಾಜ್ಯಾ ರಾಜಧಾನಿಯಲ್ಲಿ ರಣಕಹಳೆ ಮೊಳಗಿಸಿದ ಅನ್ನದಾತರು ಕೇಂದ್ರ,ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದ್ರು.
 

ಬೆಂಗಳೂರಿನಲ್ಲಿ(Bengaluru) ಮತ್ತೊಮ್ಮೆ ರೈತರು ಹೋರಾಟಕ್ಕೆ ಇಳದಿದ್ದಾರೆ. ರೈತ ವಿರೋಧಿ ಕಾಯ್ದೆಗಳ ರದ್ದು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಭಾನುವಾರದಿಂದ ಫ್ರೀಡಂಪಾರ್ಕ್‌ನಲ್ಲಿ(Freedom Park) ಹೋರಾಟ ನಡೆಸುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಜೊತೆಗೆ ವಿವಿಧ ಕಾರ್ಮಿಕ ಸಂಘಟನೆಗಳು ಜಂಟಿಯಾಗಗಿ ಹೋರಾಟಕ್ಕಿಳಿದಿವೆ. ಸರ್ಕಾರ ಧಿಕ್ಕಾರ ಕೂಗಿದ ರೈತರು(Farmers) ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ರು. ಅನ್ನದಾತರ ಹೋರಾಟಕ್ಕೆ ಆಶಾಕಾರ್ಯಕರ್ತೆಯರು ಸೇರಿದಂತೆ ವಿವಿಧ 58 ಸಂಘಟನೆಗಳು ಸಾಥ್ ನೀಡಿದ್ವು. ಕೇಂದ್ರ ಸರ್ಕಾರದ(Central government) ನೀತಿಗಳಿಂದ ತೊಂದರೆಗೊಳಗಾಗಿರುವ ವಿವಿಧ ಸಮುದಾಯಗಳು, ನಮ್ಮ ಸಮಸ್ಯೆಗಳನ್ನು ಬಗೆಹರಿಸಿ ಎಂದು 21 ಬೇಡಿಕೆ ಪಟ್ಟಿ ಇಟ್ಟಿದ್ದಾರೆ. ವಿರೋಧ ಮಧ್ಯೆ ಜಾರಿ ಮಾಡಿರೋ APMC ಕಾಯ್ದೆ ರದ್ದು ಮಾಡಬೇಕು. ಫಸಲ್ ಭಿಮಾ ಯೋಜನೆಯಲ್ಲಿನ ವಂಚನೆ ಸರಿಪಡಿಸಬೇಕು. ರಾಜ್ಯ ಭೂ ಸುಧಾರಣಾ ತಿದ್ದುಪಡಸಿ ಕಾಯ್ದೆ ರದ್ದು ಮಾಡಬೇಕು ಅನ್ನೋದು ಪ್ರಮುಖ ಬೇಡಿಕೆಗಳು. ಅಲ್ಲದೇ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಶಾಸನ ಮಾಡಬೇಕು, ಬಿತ್ತನೆ ಬೀಜ, ರಸಗೊಬ್ಬರ, ಕರೆಂಟ್‌ ಮೇಲೆ ಸಬ್ಸಿಡಿ ಹೆಚ್ಚಿಸುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಕಾರ್ಮಿಕರ ಕೆಲಸ ಅವಧಿ 8ರಿಂದ 12 ಗಂಟೆ ಏರಿಸುವದನ್ನ ಕೈಬಿಡುವಂತೆಯೂ ಆಗ್ರಹಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಕನಿಷ್ಟ ವೇತನ ಮಾಸಿಕ 26,000 ರೂ ನಿಗದಿ ಮಾಡಬೇಕು, ಬಗ‌ರ್ ಹುಕುಂ ರೈತರಿಗೆ ಕೂಡಲೇ ಹಕ್ಕುಪತ್ರ ನೀಡಬೇಕು. ರೈತರ ಮೇಲೆ‌ಹಾಕಿರುವ ಕೇಸ್‌ಗಳನ್ನ ವಜಾ ಮಾಡಬೇಕು ಅನ್ನೋ ಬೇಡಿಕೆ ಜೊತೆಗೆ ಆಶಾ ಕಾರ್ಯಕರ್ತೆಯರನ್ನ ಕಾರ್ಮಿಕರೆಂದು ಪರಿಗಣಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  3 ದಿನದಲ್ಲಿ ಸಿನಿಮಾ 6 ವರೆ ಕೋಟಿ ಕಲೆಕ್ಷನ್! ಇದು ರೆಬೆಲ್ ರೆಕಾರ್ಡ್ಸ್!

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more