ರಾಜ್ಯ ರಾಜಧಾನಿಯಲ್ಲಿ ಅನ್ನದಾತರ ಕಹಳೆ.. ರೈತ ವಿರೋಧಿ ಕಾಯ್ದೆಗಳ ರದ್ದಿಗೆ ಆಗ್ರಹ

ರಾಜ್ಯ ರಾಜಧಾನಿಯಲ್ಲಿ ಅನ್ನದಾತರ ಕಹಳೆ.. ರೈತ ವಿರೋಧಿ ಕಾಯ್ದೆಗಳ ರದ್ದಿಗೆ ಆಗ್ರಹ

Published : Nov 28, 2023, 10:01 AM IST

ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರೋಧಿಸಿ ಬೆಂಗಳೂರಿನಲ್ಲಿ ರೈತರು ಹೋರಾಟ ನಡೆಸಿದ್ರು. 21 ಬೇಡಿಕೆ ಇಟ್ಟ ಮಣ್ಣಿನ ಮಕ್ಕಳಿಗೆ 58 ವಿವಿಧ ಸಂಘಟನೆಗಳು ಸಾಥ್ ನೀಡಿದ್ವು. ರಾಜ್ಯಾ ರಾಜಧಾನಿಯಲ್ಲಿ ರಣಕಹಳೆ ಮೊಳಗಿಸಿದ ಅನ್ನದಾತರು ಕೇಂದ್ರ,ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದ್ರು.
 

ಬೆಂಗಳೂರಿನಲ್ಲಿ(Bengaluru) ಮತ್ತೊಮ್ಮೆ ರೈತರು ಹೋರಾಟಕ್ಕೆ ಇಳದಿದ್ದಾರೆ. ರೈತ ವಿರೋಧಿ ಕಾಯ್ದೆಗಳ ರದ್ದು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಭಾನುವಾರದಿಂದ ಫ್ರೀಡಂಪಾರ್ಕ್‌ನಲ್ಲಿ(Freedom Park) ಹೋರಾಟ ನಡೆಸುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಜೊತೆಗೆ ವಿವಿಧ ಕಾರ್ಮಿಕ ಸಂಘಟನೆಗಳು ಜಂಟಿಯಾಗಗಿ ಹೋರಾಟಕ್ಕಿಳಿದಿವೆ. ಸರ್ಕಾರ ಧಿಕ್ಕಾರ ಕೂಗಿದ ರೈತರು(Farmers) ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ರು. ಅನ್ನದಾತರ ಹೋರಾಟಕ್ಕೆ ಆಶಾಕಾರ್ಯಕರ್ತೆಯರು ಸೇರಿದಂತೆ ವಿವಿಧ 58 ಸಂಘಟನೆಗಳು ಸಾಥ್ ನೀಡಿದ್ವು. ಕೇಂದ್ರ ಸರ್ಕಾರದ(Central government) ನೀತಿಗಳಿಂದ ತೊಂದರೆಗೊಳಗಾಗಿರುವ ವಿವಿಧ ಸಮುದಾಯಗಳು, ನಮ್ಮ ಸಮಸ್ಯೆಗಳನ್ನು ಬಗೆಹರಿಸಿ ಎಂದು 21 ಬೇಡಿಕೆ ಪಟ್ಟಿ ಇಟ್ಟಿದ್ದಾರೆ. ವಿರೋಧ ಮಧ್ಯೆ ಜಾರಿ ಮಾಡಿರೋ APMC ಕಾಯ್ದೆ ರದ್ದು ಮಾಡಬೇಕು. ಫಸಲ್ ಭಿಮಾ ಯೋಜನೆಯಲ್ಲಿನ ವಂಚನೆ ಸರಿಪಡಿಸಬೇಕು. ರಾಜ್ಯ ಭೂ ಸುಧಾರಣಾ ತಿದ್ದುಪಡಸಿ ಕಾಯ್ದೆ ರದ್ದು ಮಾಡಬೇಕು ಅನ್ನೋದು ಪ್ರಮುಖ ಬೇಡಿಕೆಗಳು. ಅಲ್ಲದೇ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಶಾಸನ ಮಾಡಬೇಕು, ಬಿತ್ತನೆ ಬೀಜ, ರಸಗೊಬ್ಬರ, ಕರೆಂಟ್‌ ಮೇಲೆ ಸಬ್ಸಿಡಿ ಹೆಚ್ಚಿಸುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಕಾರ್ಮಿಕರ ಕೆಲಸ ಅವಧಿ 8ರಿಂದ 12 ಗಂಟೆ ಏರಿಸುವದನ್ನ ಕೈಬಿಡುವಂತೆಯೂ ಆಗ್ರಹಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಕನಿಷ್ಟ ವೇತನ ಮಾಸಿಕ 26,000 ರೂ ನಿಗದಿ ಮಾಡಬೇಕು, ಬಗ‌ರ್ ಹುಕುಂ ರೈತರಿಗೆ ಕೂಡಲೇ ಹಕ್ಕುಪತ್ರ ನೀಡಬೇಕು. ರೈತರ ಮೇಲೆ‌ಹಾಕಿರುವ ಕೇಸ್‌ಗಳನ್ನ ವಜಾ ಮಾಡಬೇಕು ಅನ್ನೋ ಬೇಡಿಕೆ ಜೊತೆಗೆ ಆಶಾ ಕಾರ್ಯಕರ್ತೆಯರನ್ನ ಕಾರ್ಮಿಕರೆಂದು ಪರಿಗಣಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  3 ದಿನದಲ್ಲಿ ಸಿನಿಮಾ 6 ವರೆ ಕೋಟಿ ಕಲೆಕ್ಷನ್! ಇದು ರೆಬೆಲ್ ರೆಕಾರ್ಡ್ಸ್!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more