Oct 5, 2021, 1:26 PM IST
ಬೆಂಗಳೂರು (ಅ.05): ಕಬ್ಬಿಗೆ ಎಫ್ಆರ್ಪಿ (Fair and Remunerative Price ) ಸೇರಿಸಿ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ.
ಡೆಡ್ಲೈನ್ ಕೊಟ್ಟು ಸಕ್ಕರೆ ಕಾರ್ಖಾನೆಗಳಿಂದ ಹಣ ವಸೂಲಿ ಮಾಡಿದ ಸರ್ಕಾರ
ಹಲವು ಜಿಲ್ಲೆಗಳಿಂದ ರೈತರು ಆಗಮಿಸಿದ್ದು ರೈಲ್ವೆ ನಿಲ್ದಾಣದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳಿದ್ದಾರೆ. ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಪ್ರತಿಭಟನೆ ಎಚ್ಚರಿಕೆ ನೀಡಲಾಗಿದೆ.