ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ನೆರೆ ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಯಾರ್ಯಾರಿಗೆ ಎಷ್ಟೆಷ್ಟು ಪರಿಹಾರ? ಇಲ್ಲಿದೆ ಡಿಟೇಲ್ಸ್.
ಬೆಂಗಳೂರು (ಅ. 21): ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ನೆರೆ ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಶೇ. 75 ಕ್ಕಿಂತ ಹೆಚ್ಚು ಹಾನಿಯಾಗಿದ್ರೆ 5 ಲಕ್ಷ ರೂ ಪರಿಹಾರ, ಶೇ. 25- 75 ರಷ್ಟು ಹಾನಿಯಾಗಿದ್ರೆ 3 ಲಕ್ಷ ರೂ ಪರಿಹಾರ, ಅಲ್ಪಸ್ವಲ್ಪ ಮನೆ ಹಾನಿಯಾಗಿದ್ದರೆ 50 ಸಾವಿರ ರೂ ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.