Karnataka rain: JNCASR 20 ವರ್ಷಗಳ ವೈಜ್ಞಾನಿಕ ಸಂಗ್ರಹ ನೀರುಪಾಲು, ಖುದ್ದು ಫೀಲ್ಡಿಗಿಳಿದ ಸಿಎಂ!

Karnataka rain: JNCASR 20 ವರ್ಷಗಳ ವೈಜ್ಞಾನಿಕ ಸಂಗ್ರಹ ನೀರುಪಾಲು, ಖುದ್ದು ಫೀಲ್ಡಿಗಿಳಿದ ಸಿಎಂ!

Published : Nov 24, 2021, 09:22 AM ISTUpdated : Nov 24, 2021, 09:40 AM IST

-  ಜವಾಹರಲಾಲ್‌ ನೆಹರು ಸಂಶೋಧನಾ ಕೇಂದ್ರಕ್ಕೆ ನೀರು ನುಗ್ಗಿ ಭಾರಿ ಅವಾಂತರ

- ಎಚ್‌ಐವಿ, ಕೊರೋನಾ ಸೇರಿ ವಿವಿಧ ವೈರಸ್‌ ಮಾದರಿ ಇಟ್ಟಿದ್ದ ಯಂತ್ರಗಳು ಆಫ್‌

- ಸಂಶೋಧನೆ ಉಪಕರಣಕ್ಕೂ ಹಾನಿ, ದೇಶದ ವಿಜ್ಞಾನ ಲೋಕಕ್ಕೆ ಭರಿಸಲಾಗದ ನಷ್ಟ

ಬೆಂಗಳೂರು (ನ. 24): ಸತತವಾಗಿ ಸುರಿಯುತ್ತಿರುವ ಅಕಾಲಿಕ ಮಳೆ ಭಾರೀ  (Rain) ಅವಾಂತರಗಳನ್ನು ಸೃಷ್ಟಿಸಿದೆ. ಎಲ್ಲೆಡೆ ಬೆಳೆ ಹಾನಿ, ಮಳೆ ಹಾನಿ ಕೆಲವು ಕಡೆ ಜೀವಹಾನಿಯೂ ಸಂಭವಿಸಿದೆ. ರಾಜಧಾನಿಯಲ್ಲಿ ಸುರಿದ ಶತಮಾನದ ಮಳೆಯಿಂದ ಜವಾಹರಲಾಲ್‌ ನೆಹರು ಅಡ್ವಾನ್ಸ್‌ ಸೈಂಟಿಫಿಕ್‌ ರಿಸಚ್‌ರ್‍ ಸೆಂಟರ್‌ಗೆ (JNCASR) ನೀರು ನುಗ್ಗಿ ದಶಕಗಳಿಂದ ‘ವೈರಾಣು ಜಗತ್ತಿನ’ ಮೇಲೆ ನಡೆಸಲಾಗುತ್ತಿದ್ದ ಸಂಶೋಧನೆಗಳು, ಸಂಗ್ರಹಿಸಿದ್ದ ಮಾದರಿಗಳು ಹಾಗೂ ಲಕ್ಷಾಂತರ ರುಪಾಯಿ ಮೌಲ್ಯದ ಸೂಕ್ಷ್ಮ ಉಪಕರಣಗಳೆಲ್ಲಾ ನೀರು ಪಾಲಾಗಿವೆ.

ಈ ಕೇಂದ್ರದ ವಿಜ್ಞಾನಿಗಳು ಹಾಗೂ ಸಂಶೋಧನಾರ್ಥಿಗಳು ಹೇಳುತ್ತಿರುವ ಪ್ರಕಾರ, ಎಚ್‌ಐವಿ ವೈರಸ್‌, ಮೂಲ ಕೊರೋನಾ ವೈರಾಣು ಹಾಗೂ ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಕೊರೋನಾ ವೈರಾಣು ಸೇರಿದಂತೆ ಕಾಲ ಕಾಲಕ್ಕೆ ರೂಪಾಂತರ ಪಡೆದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವ ವಿವಿಧ ವೈರಾಣುಗಳ ಮಾದರಿ ಹಾಗೂ ಅವುಗಳ ಅನುವಂಶಿಕ ಮಾದರಿ ಸಂಗ್ರಹಿಸಿ ಅವುಗಳ ರೂಪಾಂತರ ಹೇಗಾಗುತ್ತದೆ, ಹೇಗೆ ಹರಡುತ್ತದೆ ಎಂಬ ಬಗ್ಗೆ ಕಳೆದ 20 ವರ್ಷಗಳಿಂದ ಸಂಶೋಧನೆ ನಡೆಸಲಾಗುತ್ತಿತ್ತು.  ಈ ಮಹಾ ಮಳೆಯಿಂದ ಸಂಶೋಧನೆಗೆ ಬಳಸುತ್ತಿದ್ದ ಲಕ್ಷಾಂತರ ರು. ಮೌಲ್ಯದ ಸೂಕ್ಷ್ಮ ಉಪಕರಣಗಳೆಲ್ಲವೂ ಹಾಳಾಗಿವೆ. ಇದರಿಂದ ದಶಕಗಳಿಂದ ನಡೆಸಿದ್ದ ನಮ್ಮ ಪರಿಶ್ರಮವೆಲ್ಲಾ ವ್ಯರ್ಥವಾದಂತಾಗಿದೆ ಎಂದು ಅಳಲು ತೋಡಿಕೊಳ್ಳುತ್ತಾರೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more