Karnataka rain: JNCASR 20 ವರ್ಷಗಳ ವೈಜ್ಞಾನಿಕ ಸಂಗ್ರಹ ನೀರುಪಾಲು, ಖುದ್ದು ಫೀಲ್ಡಿಗಿಳಿದ ಸಿಎಂ!

Karnataka rain: JNCASR 20 ವರ್ಷಗಳ ವೈಜ್ಞಾನಿಕ ಸಂಗ್ರಹ ನೀರುಪಾಲು, ಖುದ್ದು ಫೀಲ್ಡಿಗಿಳಿದ ಸಿಎಂ!

Published : Nov 24, 2021, 09:22 AM ISTUpdated : Nov 24, 2021, 09:40 AM IST

-  ಜವಾಹರಲಾಲ್‌ ನೆಹರು ಸಂಶೋಧನಾ ಕೇಂದ್ರಕ್ಕೆ ನೀರು ನುಗ್ಗಿ ಭಾರಿ ಅವಾಂತರ

- ಎಚ್‌ಐವಿ, ಕೊರೋನಾ ಸೇರಿ ವಿವಿಧ ವೈರಸ್‌ ಮಾದರಿ ಇಟ್ಟಿದ್ದ ಯಂತ್ರಗಳು ಆಫ್‌

- ಸಂಶೋಧನೆ ಉಪಕರಣಕ್ಕೂ ಹಾನಿ, ದೇಶದ ವಿಜ್ಞಾನ ಲೋಕಕ್ಕೆ ಭರಿಸಲಾಗದ ನಷ್ಟ

ಬೆಂಗಳೂರು (ನ. 24): ಸತತವಾಗಿ ಸುರಿಯುತ್ತಿರುವ ಅಕಾಲಿಕ ಮಳೆ ಭಾರೀ  (Rain) ಅವಾಂತರಗಳನ್ನು ಸೃಷ್ಟಿಸಿದೆ. ಎಲ್ಲೆಡೆ ಬೆಳೆ ಹಾನಿ, ಮಳೆ ಹಾನಿ ಕೆಲವು ಕಡೆ ಜೀವಹಾನಿಯೂ ಸಂಭವಿಸಿದೆ. ರಾಜಧಾನಿಯಲ್ಲಿ ಸುರಿದ ಶತಮಾನದ ಮಳೆಯಿಂದ ಜವಾಹರಲಾಲ್‌ ನೆಹರು ಅಡ್ವಾನ್ಸ್‌ ಸೈಂಟಿಫಿಕ್‌ ರಿಸಚ್‌ರ್‍ ಸೆಂಟರ್‌ಗೆ (JNCASR) ನೀರು ನುಗ್ಗಿ ದಶಕಗಳಿಂದ ‘ವೈರಾಣು ಜಗತ್ತಿನ’ ಮೇಲೆ ನಡೆಸಲಾಗುತ್ತಿದ್ದ ಸಂಶೋಧನೆಗಳು, ಸಂಗ್ರಹಿಸಿದ್ದ ಮಾದರಿಗಳು ಹಾಗೂ ಲಕ್ಷಾಂತರ ರುಪಾಯಿ ಮೌಲ್ಯದ ಸೂಕ್ಷ್ಮ ಉಪಕರಣಗಳೆಲ್ಲಾ ನೀರು ಪಾಲಾಗಿವೆ.

ಈ ಕೇಂದ್ರದ ವಿಜ್ಞಾನಿಗಳು ಹಾಗೂ ಸಂಶೋಧನಾರ್ಥಿಗಳು ಹೇಳುತ್ತಿರುವ ಪ್ರಕಾರ, ಎಚ್‌ಐವಿ ವೈರಸ್‌, ಮೂಲ ಕೊರೋನಾ ವೈರಾಣು ಹಾಗೂ ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಕೊರೋನಾ ವೈರಾಣು ಸೇರಿದಂತೆ ಕಾಲ ಕಾಲಕ್ಕೆ ರೂಪಾಂತರ ಪಡೆದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವ ವಿವಿಧ ವೈರಾಣುಗಳ ಮಾದರಿ ಹಾಗೂ ಅವುಗಳ ಅನುವಂಶಿಕ ಮಾದರಿ ಸಂಗ್ರಹಿಸಿ ಅವುಗಳ ರೂಪಾಂತರ ಹೇಗಾಗುತ್ತದೆ, ಹೇಗೆ ಹರಡುತ್ತದೆ ಎಂಬ ಬಗ್ಗೆ ಕಳೆದ 20 ವರ್ಷಗಳಿಂದ ಸಂಶೋಧನೆ ನಡೆಸಲಾಗುತ್ತಿತ್ತು.  ಈ ಮಹಾ ಮಳೆಯಿಂದ ಸಂಶೋಧನೆಗೆ ಬಳಸುತ್ತಿದ್ದ ಲಕ್ಷಾಂತರ ರು. ಮೌಲ್ಯದ ಸೂಕ್ಷ್ಮ ಉಪಕರಣಗಳೆಲ್ಲವೂ ಹಾಳಾಗಿವೆ. ಇದರಿಂದ ದಶಕಗಳಿಂದ ನಡೆಸಿದ್ದ ನಮ್ಮ ಪರಿಶ್ರಮವೆಲ್ಲಾ ವ್ಯರ್ಥವಾದಂತಾಗಿದೆ ಎಂದು ಅಳಲು ತೋಡಿಕೊಳ್ಳುತ್ತಾರೆ.

 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more