ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ದೋಖಾ: ಅರ್ಜಿ ಸಲ್ಲಿಕೆ ನೆಪದಲ್ಲಿ ಹಣ ವಸೂಲಿಗಿಳಿದ ಖಾಸಗಿ ಏಜೆನ್ಸಿ

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ದೋಖಾ: ಅರ್ಜಿ ಸಲ್ಲಿಕೆ ನೆಪದಲ್ಲಿ ಹಣ ವಸೂಲಿಗಿಳಿದ ಖಾಸಗಿ ಏಜೆನ್ಸಿ

Published : Jun 29, 2023, 11:03 PM IST

ಕರ್ನಾಟಕದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭವಾಗದಿದ್ದರೂ, ಬಳ್ಳಾರಿಯಲ್ಲಿ ಖಾಸಗಿ ಏಜೆನ್ಸಿಯೊಂದು ಅರ್ಜಿ ಸಲ್ಲಿಕೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದೆ.

ಬಳ್ಳಾರಿ (ಜೂ.29): ರಾಜ್ಯ ಸರ್ಕಾರದ ಗ್ಯಾರಂಟಿ ಗಲಾಟೆ ರಾಜ್ಯದ ರಾಜಧಾನಿಯಿಂದ ಇದೀಗ ಗಲ್ಲಿಗೆ ಬಂದಿದೆ. ಸರ್ಕಾರದ ಯೋಜನೆ ಲಾಭ ಪಡೆಯೋ ಧಾವಂತ ಸಾರ್ವಜನಿಕರದ್ದಾಗಿದೆ. ಇದರ ದುರುಪಯೋಗ ಪಡೆದು ಕೊಂಡು ಒಂದಷ್ಟು ಹಣ ಮಾಡಲು ಖಾಸಗಿ ಏಜೆನ್ಸಿಯವರು ಮುಂದಾಗಿದ್ದಾರೆ. ಈ ಮಧ್ಯೆ ಏನು ಗೊತ್ತಾಗದ ಜನರು ಹಣವನ್ನು ಕಳೆದುಕೊಂಡು ಪರದಾಡ್ತಿದ್ದಾರೆ. 

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗಳಾದ ಗೃಹಲಕ್ಣ್ಮೀ ಯೋಜನೆ ಅಪ್ಲಿಕೇಶನ್ ಇನ್ನೂ ಬಿಟ್ಟಿಲ್ಲ. ಆದ್ರೇ, ಅಷ್ಟರಲ್ಲಾಗಲೇ ಖಾಸಗಿ ಏಜೆನ್ಸಿಯವರು ಅಪ್ಲಿಕೇಶನ್ ತುಂಬುತ್ತೇವೆಂದು ಮನೆ ಮನೆಗೆ ತೆರಳಿ‌ 150 ರೂಪಾಯಿ ಹಣ ಪಡೆಯುತ್ತಿದ್ದಾರಂತೆ. ಹೀಗೆ ಬಂದ ಜನರನ್ನು ಬಳ್ಳಾರಿಯಲ್ಲಿ ಜನರು ಪ್ರಶ್ನಿಸಿ ಪೊಲೀಸರಿಗೊಪ್ಪಿಸಿದ್ದಾರೆ. 

ದಿಶಾ ಒನ್ ಹೆಸರಲ್ಲಿ ಖಾಸಗಿ ಏಜೆನ್ಸಿಯವರು ಸರ್ಕಾರದ ಯೋಜನೆಗಳಾದ ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ಇತರೆ ಸ್ಕೀಂ ಫಾರಂ ತುಂಬುತ್ತೇವೆಂದು ಹಣ ಸಂಗ್ರಹ ಮಾಡಿದ್ದಾರೆ. ಒಂದು ಫಾರಂ ತುಂಬಿಕೊಡಲು‌ 150 ರೂಪಾಯಿ ಹಣ  ಕಲೆಕ್ಟ್ ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ಕೆಲವರು ಪ್ರಶ್ನಿಸೊದ್ರ ಜೊತೆ ಗಲಾಟೆ ಮಾಡಿದ್ದಾರೆ. ಆದ್ರೇ ಖಾಸಗಿ ಏಜೆನ್ಸಿಯವರು ಮಾತ್ರ ಇದು ನಮ್ಮ ವೃತ್ತಿ ಜನಸೇವೆ ಮಾಡೋದ್ರ ಜೊತೆಗೆ ಒಂದಷ್ಟು ಫೀಸ್ ನಿಗದಿ‌ ಮಾಡಿದ್ದೇವೆ ಎನ್ನುತ್ತಿದ್ದಾರೆ. ಆದರೆ ಜನರು ಮಾತ್ರ ಉಚಿತ ಘೋಷಣೆಗೆ ಹಣ ಯಾಕೆ ಎನ್ನುತ್ತಿದ್ದಾರೆ. ಗಲಾಟೆ ಜೋರಾದ ಬಳಿಕ ಖಾಸಗಿ ಏಜೆನ್ಸಿಯವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more