ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ದೋಖಾ: ಅರ್ಜಿ ಸಲ್ಲಿಕೆ ನೆಪದಲ್ಲಿ ಹಣ ವಸೂಲಿಗಿಳಿದ ಖಾಸಗಿ ಏಜೆನ್ಸಿ

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ದೋಖಾ: ಅರ್ಜಿ ಸಲ್ಲಿಕೆ ನೆಪದಲ್ಲಿ ಹಣ ವಸೂಲಿಗಿಳಿದ ಖಾಸಗಿ ಏಜೆನ್ಸಿ

Published : Jun 29, 2023, 11:03 PM IST

ಕರ್ನಾಟಕದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭವಾಗದಿದ್ದರೂ, ಬಳ್ಳಾರಿಯಲ್ಲಿ ಖಾಸಗಿ ಏಜೆನ್ಸಿಯೊಂದು ಅರ್ಜಿ ಸಲ್ಲಿಕೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದೆ.

ಬಳ್ಳಾರಿ (ಜೂ.29): ರಾಜ್ಯ ಸರ್ಕಾರದ ಗ್ಯಾರಂಟಿ ಗಲಾಟೆ ರಾಜ್ಯದ ರಾಜಧಾನಿಯಿಂದ ಇದೀಗ ಗಲ್ಲಿಗೆ ಬಂದಿದೆ. ಸರ್ಕಾರದ ಯೋಜನೆ ಲಾಭ ಪಡೆಯೋ ಧಾವಂತ ಸಾರ್ವಜನಿಕರದ್ದಾಗಿದೆ. ಇದರ ದುರುಪಯೋಗ ಪಡೆದು ಕೊಂಡು ಒಂದಷ್ಟು ಹಣ ಮಾಡಲು ಖಾಸಗಿ ಏಜೆನ್ಸಿಯವರು ಮುಂದಾಗಿದ್ದಾರೆ. ಈ ಮಧ್ಯೆ ಏನು ಗೊತ್ತಾಗದ ಜನರು ಹಣವನ್ನು ಕಳೆದುಕೊಂಡು ಪರದಾಡ್ತಿದ್ದಾರೆ. 

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗಳಾದ ಗೃಹಲಕ್ಣ್ಮೀ ಯೋಜನೆ ಅಪ್ಲಿಕೇಶನ್ ಇನ್ನೂ ಬಿಟ್ಟಿಲ್ಲ. ಆದ್ರೇ, ಅಷ್ಟರಲ್ಲಾಗಲೇ ಖಾಸಗಿ ಏಜೆನ್ಸಿಯವರು ಅಪ್ಲಿಕೇಶನ್ ತುಂಬುತ್ತೇವೆಂದು ಮನೆ ಮನೆಗೆ ತೆರಳಿ‌ 150 ರೂಪಾಯಿ ಹಣ ಪಡೆಯುತ್ತಿದ್ದಾರಂತೆ. ಹೀಗೆ ಬಂದ ಜನರನ್ನು ಬಳ್ಳಾರಿಯಲ್ಲಿ ಜನರು ಪ್ರಶ್ನಿಸಿ ಪೊಲೀಸರಿಗೊಪ್ಪಿಸಿದ್ದಾರೆ. 

ದಿಶಾ ಒನ್ ಹೆಸರಲ್ಲಿ ಖಾಸಗಿ ಏಜೆನ್ಸಿಯವರು ಸರ್ಕಾರದ ಯೋಜನೆಗಳಾದ ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ಇತರೆ ಸ್ಕೀಂ ಫಾರಂ ತುಂಬುತ್ತೇವೆಂದು ಹಣ ಸಂಗ್ರಹ ಮಾಡಿದ್ದಾರೆ. ಒಂದು ಫಾರಂ ತುಂಬಿಕೊಡಲು‌ 150 ರೂಪಾಯಿ ಹಣ  ಕಲೆಕ್ಟ್ ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ಕೆಲವರು ಪ್ರಶ್ನಿಸೊದ್ರ ಜೊತೆ ಗಲಾಟೆ ಮಾಡಿದ್ದಾರೆ. ಆದ್ರೇ ಖಾಸಗಿ ಏಜೆನ್ಸಿಯವರು ಮಾತ್ರ ಇದು ನಮ್ಮ ವೃತ್ತಿ ಜನಸೇವೆ ಮಾಡೋದ್ರ ಜೊತೆಗೆ ಒಂದಷ್ಟು ಫೀಸ್ ನಿಗದಿ‌ ಮಾಡಿದ್ದೇವೆ ಎನ್ನುತ್ತಿದ್ದಾರೆ. ಆದರೆ ಜನರು ಮಾತ್ರ ಉಚಿತ ಘೋಷಣೆಗೆ ಹಣ ಯಾಕೆ ಎನ್ನುತ್ತಿದ್ದಾರೆ. ಗಲಾಟೆ ಜೋರಾದ ಬಳಿಕ ಖಾಸಗಿ ಏಜೆನ್ಸಿಯವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more