ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ದೋಖಾ: ಅರ್ಜಿ ಸಲ್ಲಿಕೆ ನೆಪದಲ್ಲಿ ಹಣ ವಸೂಲಿಗಿಳಿದ ಖಾಸಗಿ ಏಜೆನ್ಸಿ

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ದೋಖಾ: ಅರ್ಜಿ ಸಲ್ಲಿಕೆ ನೆಪದಲ್ಲಿ ಹಣ ವಸೂಲಿಗಿಳಿದ ಖಾಸಗಿ ಏಜೆನ್ಸಿ

Published : Jun 29, 2023, 11:03 PM IST

ಕರ್ನಾಟಕದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭವಾಗದಿದ್ದರೂ, ಬಳ್ಳಾರಿಯಲ್ಲಿ ಖಾಸಗಿ ಏಜೆನ್ಸಿಯೊಂದು ಅರ್ಜಿ ಸಲ್ಲಿಕೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದೆ.

ಬಳ್ಳಾರಿ (ಜೂ.29): ರಾಜ್ಯ ಸರ್ಕಾರದ ಗ್ಯಾರಂಟಿ ಗಲಾಟೆ ರಾಜ್ಯದ ರಾಜಧಾನಿಯಿಂದ ಇದೀಗ ಗಲ್ಲಿಗೆ ಬಂದಿದೆ. ಸರ್ಕಾರದ ಯೋಜನೆ ಲಾಭ ಪಡೆಯೋ ಧಾವಂತ ಸಾರ್ವಜನಿಕರದ್ದಾಗಿದೆ. ಇದರ ದುರುಪಯೋಗ ಪಡೆದು ಕೊಂಡು ಒಂದಷ್ಟು ಹಣ ಮಾಡಲು ಖಾಸಗಿ ಏಜೆನ್ಸಿಯವರು ಮುಂದಾಗಿದ್ದಾರೆ. ಈ ಮಧ್ಯೆ ಏನು ಗೊತ್ತಾಗದ ಜನರು ಹಣವನ್ನು ಕಳೆದುಕೊಂಡು ಪರದಾಡ್ತಿದ್ದಾರೆ. 

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗಳಾದ ಗೃಹಲಕ್ಣ್ಮೀ ಯೋಜನೆ ಅಪ್ಲಿಕೇಶನ್ ಇನ್ನೂ ಬಿಟ್ಟಿಲ್ಲ. ಆದ್ರೇ, ಅಷ್ಟರಲ್ಲಾಗಲೇ ಖಾಸಗಿ ಏಜೆನ್ಸಿಯವರು ಅಪ್ಲಿಕೇಶನ್ ತುಂಬುತ್ತೇವೆಂದು ಮನೆ ಮನೆಗೆ ತೆರಳಿ‌ 150 ರೂಪಾಯಿ ಹಣ ಪಡೆಯುತ್ತಿದ್ದಾರಂತೆ. ಹೀಗೆ ಬಂದ ಜನರನ್ನು ಬಳ್ಳಾರಿಯಲ್ಲಿ ಜನರು ಪ್ರಶ್ನಿಸಿ ಪೊಲೀಸರಿಗೊಪ್ಪಿಸಿದ್ದಾರೆ. 

ದಿಶಾ ಒನ್ ಹೆಸರಲ್ಲಿ ಖಾಸಗಿ ಏಜೆನ್ಸಿಯವರು ಸರ್ಕಾರದ ಯೋಜನೆಗಳಾದ ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ಇತರೆ ಸ್ಕೀಂ ಫಾರಂ ತುಂಬುತ್ತೇವೆಂದು ಹಣ ಸಂಗ್ರಹ ಮಾಡಿದ್ದಾರೆ. ಒಂದು ಫಾರಂ ತುಂಬಿಕೊಡಲು‌ 150 ರೂಪಾಯಿ ಹಣ  ಕಲೆಕ್ಟ್ ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ಕೆಲವರು ಪ್ರಶ್ನಿಸೊದ್ರ ಜೊತೆ ಗಲಾಟೆ ಮಾಡಿದ್ದಾರೆ. ಆದ್ರೇ ಖಾಸಗಿ ಏಜೆನ್ಸಿಯವರು ಮಾತ್ರ ಇದು ನಮ್ಮ ವೃತ್ತಿ ಜನಸೇವೆ ಮಾಡೋದ್ರ ಜೊತೆಗೆ ಒಂದಷ್ಟು ಫೀಸ್ ನಿಗದಿ‌ ಮಾಡಿದ್ದೇವೆ ಎನ್ನುತ್ತಿದ್ದಾರೆ. ಆದರೆ ಜನರು ಮಾತ್ರ ಉಚಿತ ಘೋಷಣೆಗೆ ಹಣ ಯಾಕೆ ಎನ್ನುತ್ತಿದ್ದಾರೆ. ಗಲಾಟೆ ಜೋರಾದ ಬಳಿಕ ಖಾಸಗಿ ಏಜೆನ್ಸಿಯವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more