ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ದೋಖಾ: ಅರ್ಜಿ ಸಲ್ಲಿಕೆ ನೆಪದಲ್ಲಿ ಹಣ ವಸೂಲಿಗಿಳಿದ ಖಾಸಗಿ ಏಜೆನ್ಸಿ

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ದೋಖಾ: ಅರ್ಜಿ ಸಲ್ಲಿಕೆ ನೆಪದಲ್ಲಿ ಹಣ ವಸೂಲಿಗಿಳಿದ ಖಾಸಗಿ ಏಜೆನ್ಸಿ

Published : Jun 29, 2023, 11:03 PM IST

ಕರ್ನಾಟಕದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭವಾಗದಿದ್ದರೂ, ಬಳ್ಳಾರಿಯಲ್ಲಿ ಖಾಸಗಿ ಏಜೆನ್ಸಿಯೊಂದು ಅರ್ಜಿ ಸಲ್ಲಿಕೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದೆ.

ಬಳ್ಳಾರಿ (ಜೂ.29): ರಾಜ್ಯ ಸರ್ಕಾರದ ಗ್ಯಾರಂಟಿ ಗಲಾಟೆ ರಾಜ್ಯದ ರಾಜಧಾನಿಯಿಂದ ಇದೀಗ ಗಲ್ಲಿಗೆ ಬಂದಿದೆ. ಸರ್ಕಾರದ ಯೋಜನೆ ಲಾಭ ಪಡೆಯೋ ಧಾವಂತ ಸಾರ್ವಜನಿಕರದ್ದಾಗಿದೆ. ಇದರ ದುರುಪಯೋಗ ಪಡೆದು ಕೊಂಡು ಒಂದಷ್ಟು ಹಣ ಮಾಡಲು ಖಾಸಗಿ ಏಜೆನ್ಸಿಯವರು ಮುಂದಾಗಿದ್ದಾರೆ. ಈ ಮಧ್ಯೆ ಏನು ಗೊತ್ತಾಗದ ಜನರು ಹಣವನ್ನು ಕಳೆದುಕೊಂಡು ಪರದಾಡ್ತಿದ್ದಾರೆ. 

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗಳಾದ ಗೃಹಲಕ್ಣ್ಮೀ ಯೋಜನೆ ಅಪ್ಲಿಕೇಶನ್ ಇನ್ನೂ ಬಿಟ್ಟಿಲ್ಲ. ಆದ್ರೇ, ಅಷ್ಟರಲ್ಲಾಗಲೇ ಖಾಸಗಿ ಏಜೆನ್ಸಿಯವರು ಅಪ್ಲಿಕೇಶನ್ ತುಂಬುತ್ತೇವೆಂದು ಮನೆ ಮನೆಗೆ ತೆರಳಿ‌ 150 ರೂಪಾಯಿ ಹಣ ಪಡೆಯುತ್ತಿದ್ದಾರಂತೆ. ಹೀಗೆ ಬಂದ ಜನರನ್ನು ಬಳ್ಳಾರಿಯಲ್ಲಿ ಜನರು ಪ್ರಶ್ನಿಸಿ ಪೊಲೀಸರಿಗೊಪ್ಪಿಸಿದ್ದಾರೆ. 

ದಿಶಾ ಒನ್ ಹೆಸರಲ್ಲಿ ಖಾಸಗಿ ಏಜೆನ್ಸಿಯವರು ಸರ್ಕಾರದ ಯೋಜನೆಗಳಾದ ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ಇತರೆ ಸ್ಕೀಂ ಫಾರಂ ತುಂಬುತ್ತೇವೆಂದು ಹಣ ಸಂಗ್ರಹ ಮಾಡಿದ್ದಾರೆ. ಒಂದು ಫಾರಂ ತುಂಬಿಕೊಡಲು‌ 150 ರೂಪಾಯಿ ಹಣ  ಕಲೆಕ್ಟ್ ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ಕೆಲವರು ಪ್ರಶ್ನಿಸೊದ್ರ ಜೊತೆ ಗಲಾಟೆ ಮಾಡಿದ್ದಾರೆ. ಆದ್ರೇ ಖಾಸಗಿ ಏಜೆನ್ಸಿಯವರು ಮಾತ್ರ ಇದು ನಮ್ಮ ವೃತ್ತಿ ಜನಸೇವೆ ಮಾಡೋದ್ರ ಜೊತೆಗೆ ಒಂದಷ್ಟು ಫೀಸ್ ನಿಗದಿ‌ ಮಾಡಿದ್ದೇವೆ ಎನ್ನುತ್ತಿದ್ದಾರೆ. ಆದರೆ ಜನರು ಮಾತ್ರ ಉಚಿತ ಘೋಷಣೆಗೆ ಹಣ ಯಾಕೆ ಎನ್ನುತ್ತಿದ್ದಾರೆ. ಗಲಾಟೆ ಜೋರಾದ ಬಳಿಕ ಖಾಸಗಿ ಏಜೆನ್ಸಿಯವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more