ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ದೋಖಾ: ಅರ್ಜಿ ಸಲ್ಲಿಕೆ ನೆಪದಲ್ಲಿ ಹಣ ವಸೂಲಿಗಿಳಿದ ಖಾಸಗಿ ಏಜೆನ್ಸಿ

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ದೋಖಾ: ಅರ್ಜಿ ಸಲ್ಲಿಕೆ ನೆಪದಲ್ಲಿ ಹಣ ವಸೂಲಿಗಿಳಿದ ಖಾಸಗಿ ಏಜೆನ್ಸಿ

Published : Jun 29, 2023, 11:03 PM IST

ಕರ್ನಾಟಕದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭವಾಗದಿದ್ದರೂ, ಬಳ್ಳಾರಿಯಲ್ಲಿ ಖಾಸಗಿ ಏಜೆನ್ಸಿಯೊಂದು ಅರ್ಜಿ ಸಲ್ಲಿಕೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದೆ.

ಬಳ್ಳಾರಿ (ಜೂ.29): ರಾಜ್ಯ ಸರ್ಕಾರದ ಗ್ಯಾರಂಟಿ ಗಲಾಟೆ ರಾಜ್ಯದ ರಾಜಧಾನಿಯಿಂದ ಇದೀಗ ಗಲ್ಲಿಗೆ ಬಂದಿದೆ. ಸರ್ಕಾರದ ಯೋಜನೆ ಲಾಭ ಪಡೆಯೋ ಧಾವಂತ ಸಾರ್ವಜನಿಕರದ್ದಾಗಿದೆ. ಇದರ ದುರುಪಯೋಗ ಪಡೆದು ಕೊಂಡು ಒಂದಷ್ಟು ಹಣ ಮಾಡಲು ಖಾಸಗಿ ಏಜೆನ್ಸಿಯವರು ಮುಂದಾಗಿದ್ದಾರೆ. ಈ ಮಧ್ಯೆ ಏನು ಗೊತ್ತಾಗದ ಜನರು ಹಣವನ್ನು ಕಳೆದುಕೊಂಡು ಪರದಾಡ್ತಿದ್ದಾರೆ. 

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗಳಾದ ಗೃಹಲಕ್ಣ್ಮೀ ಯೋಜನೆ ಅಪ್ಲಿಕೇಶನ್ ಇನ್ನೂ ಬಿಟ್ಟಿಲ್ಲ. ಆದ್ರೇ, ಅಷ್ಟರಲ್ಲಾಗಲೇ ಖಾಸಗಿ ಏಜೆನ್ಸಿಯವರು ಅಪ್ಲಿಕೇಶನ್ ತುಂಬುತ್ತೇವೆಂದು ಮನೆ ಮನೆಗೆ ತೆರಳಿ‌ 150 ರೂಪಾಯಿ ಹಣ ಪಡೆಯುತ್ತಿದ್ದಾರಂತೆ. ಹೀಗೆ ಬಂದ ಜನರನ್ನು ಬಳ್ಳಾರಿಯಲ್ಲಿ ಜನರು ಪ್ರಶ್ನಿಸಿ ಪೊಲೀಸರಿಗೊಪ್ಪಿಸಿದ್ದಾರೆ. 

ದಿಶಾ ಒನ್ ಹೆಸರಲ್ಲಿ ಖಾಸಗಿ ಏಜೆನ್ಸಿಯವರು ಸರ್ಕಾರದ ಯೋಜನೆಗಳಾದ ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ಇತರೆ ಸ್ಕೀಂ ಫಾರಂ ತುಂಬುತ್ತೇವೆಂದು ಹಣ ಸಂಗ್ರಹ ಮಾಡಿದ್ದಾರೆ. ಒಂದು ಫಾರಂ ತುಂಬಿಕೊಡಲು‌ 150 ರೂಪಾಯಿ ಹಣ  ಕಲೆಕ್ಟ್ ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ಕೆಲವರು ಪ್ರಶ್ನಿಸೊದ್ರ ಜೊತೆ ಗಲಾಟೆ ಮಾಡಿದ್ದಾರೆ. ಆದ್ರೇ ಖಾಸಗಿ ಏಜೆನ್ಸಿಯವರು ಮಾತ್ರ ಇದು ನಮ್ಮ ವೃತ್ತಿ ಜನಸೇವೆ ಮಾಡೋದ್ರ ಜೊತೆಗೆ ಒಂದಷ್ಟು ಫೀಸ್ ನಿಗದಿ‌ ಮಾಡಿದ್ದೇವೆ ಎನ್ನುತ್ತಿದ್ದಾರೆ. ಆದರೆ ಜನರು ಮಾತ್ರ ಉಚಿತ ಘೋಷಣೆಗೆ ಹಣ ಯಾಕೆ ಎನ್ನುತ್ತಿದ್ದಾರೆ. ಗಲಾಟೆ ಜೋರಾದ ಬಳಿಕ ಖಾಸಗಿ ಏಜೆನ್ಸಿಯವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more