ನಾಳೆಯಿಂದ ಸೆಮಿ ಲಾಕ್ಡೌನ್‌, ಅಂತರ್‌ಜಿಲ್ಲೆ, ಅಂತಾರಾಜ್ಯ ಓಡಾಟ ಇಂದೇ ಕೊನೆ

May 9, 2021, 9:51 AM IST

ಬೆಂಗಳೂರು (ಮೇ. 09): ಮೇ 10 ರಿಂದ ರಾಜ್ಯದಲ್ಲಿ ಸೆಮಿ ಲಾಕ್‌ಡೌನ್ ಜಾರಿಯಾಗಲಿದೆ. ಲಾಕ್‌ಡೌನ್ ವಿಫಲವಾಗದಂತೆ ನೋಡಿಕೊಳ್ಳಿ. ರಾಜ್ಯದಲ್ಲಿ ಮಾರ್ಗಸೂಚಿ ಸರಿಯಾಗಿ ಪಾಲನೆಯಾಗುವಂತೆ ನೋಡಿಕೊಳ್ಳಿ ಎಂದು ಖಾಕಿ ಪಡೆಗೆ ಸಿಎಂ ಸಂಪೂರ್ಣ ಅಧಿಕಾರ ಕೊಟ್ಟಿದ್ದಾರೆ. 

ಅಂತಾರಾಜ್ಯ, ಅಂತರ್‌ಜಿಲ್ಲೆ ವಾಹನಗಳ ಓಡಾಟಕ್ಕೆ ಇಂದು ರಾತ್ರಿಯಿಂದಲೇ ನಿರ್ಬಂಧ ಬೀಳಲಿದೆ. ಅನಗತ್ಯವಾಗಿ ರಸ್ತೆಗಿಳಿದರೆ ಬೆತ್ತದೇಟು, ಕಠಿಣ ಕ್ರಮ ಗ್ಯಾರಂಟಿ ಎಂದು ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆ.