ಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣ ಮತ್ತಷ್ಟು ದುಬಾರಿ: ಪ್ರಯಾಣಿಕರಿಂದ ಖಾಸಗಿ ಬಸ್‌ಗಳ ಹಗಲು ದರೋಡೆ !

ಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣ ಮತ್ತಷ್ಟು ದುಬಾರಿ: ಪ್ರಯಾಣಿಕರಿಂದ ಖಾಸಗಿ ಬಸ್‌ಗಳ ಹಗಲು ದರೋಡೆ !

Published : Sep 14, 2023, 10:37 AM IST

ಗೌರಿ-ಗಣೇಶ ಹಬ್ಬ ಇರುವ ಹಿನ್ನೆಲೆ ಪ್ರಯಾಣಿಕರಿಂದ ದುಬಾರಿ ಹಣ ವಸೂಲಿ ಮಾಡಲು ಖಾಸಗಿ ಬಸ್‌ಗಳು ಮುಂದಾಗಿವೆ.
 


ಗೌರಿ ಗಣೇಶ ಹಬ್ಬಕ್ಕೆ(gowri ganesha festival) ಇನ್ನೇನು ಕೆಲವು ದಿನಗಳು ಬಾಕಿ ಇದೆ. ಹೀಗಾಗಿ ಹಬ್ಬ ಆಚರಿಸಲು ಜನ ತಮ್ಮೂರಿಗೆ ತೆರಳಲು ರೆಡಿಯಾಗಿದ್ದಾರೆ.  ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್‌ಗಳ(Private buses) ಮಾಲೀಕರು ಹೆಚ್ಚಿನ ಪ್ರಯಾಣ ದರ ವಿಧಿಸಿ ದಂಧೆಗೆ ಇಳಿದಿದ್ದಾರೆ. ಟಿಕೆಟ್ ದರ(Ticket peice) ಯದ್ವಾತದ್ವಾ ಏರಿಕೆ ಮಾಡಿದ್ದು ಪ್ರಯಾಣಿಕರು ಕಂಗಾಲಾಗಿದ್ದಾರೆ. ಸಾಮಾನ್ಯ ದಿನಗಳಲ್ಲಿ 500 ರಿಂದ 600 ರೂ.ಗಳ ಟಿಕೆಟ್ ದರ ಈಗ 900 ರಿಂದ 2500ವರೆಗೂ ಫಿಕ್ಸ್ ಮಾಡಲಾಗಿದೆ. ಜನ ಹಬ್ಬಕ್ಕೆ ಮುಂಚಿತವಾಗಿಯೇ ಹೊರಟಿದ್ದಾರೆ. ಇದೇ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಖಾಸಗಿ ಬಸ್ ಮಾಲೀಕರು ಮನಬಂದಂತೆ ದರಗಳನ್ನು ವಿಧಿಸಿ ಪ್ರಯಾಣಿಕರ ಸುಲಿಗೆಗೆ ಇಳಿದಿದ್ದಾರೆ. ಇದು ಕೆಲವು ಸ್ಯಾಂಪಲ್‌ಗಳಷ್ಟೇ. ಬೆಂಗಳೂರಿನಿಂದ(bengaluru) ಬೇರೆ ಬೆರೆ ಜಿಲ್ಲೆಗಳಿಗೆ ಹೊರಡುವ ಎಲ್ಲಾ ರೂಟ್ಗಳಲ್ಲೂ ಇದೇ ರೀರಿ ದರ ಏರಿಕೆ ಬರೆ ಎಳೆಯಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಗೆ ಸಾಲು ಸಾಲು ದೂರುಗಳು ಬಂದ  ಬೆನ್ನಲ್ಲೇ ಖಾಸಗಿ ಬಸ್ ಮೇಲೆ ಕಾನೂನು ರೀತಿ ಕ್ರಮಕ್ಕೆ ಮುಂದಾಗಿದೆ. ಒಟ್ಟಿನಲ್ಲಿ ಹಬ್ಬ ಬಂದರೆ ಸಾಕು ಖಾಸಗಿ ಬಸ್ಗಳಿಗೆ ಪ್ರಯಾಣಿಕರ ಸುಲಿಗೆಗೆಗ ರಹದಾರಿಯಾಗಿದೆ. ಸರ್ಕಾರ  ಮುತುವರ್ಜಿ ವಹಿಸಿ ಕಡಿವಾಣ ಹಾಕಿದ್ರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇಲ್ಲದಿದ್ರೆ ಖಾಸಗಿ ದಂಧೆ ಎಗ್ಗಿಲ್ಲದೆ  ನಡೆಯಲಿದೆ. 

ಇದನ್ನೂ ವೀಕ್ಷಿಸಿ:  ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!