Salute to Bipin Rawat: ಅಪ್ರತಿಮ ಸೇನಾಧಿಕಾರಿಗೆ ಕೊಡಗಿನ ಜೊತೆಗಿತ್ತು ಅವಿನಾಭಾವ ಸಂಬಂಧ..!

Salute to Bipin Rawat: ಅಪ್ರತಿಮ ಸೇನಾಧಿಕಾರಿಗೆ ಕೊಡಗಿನ ಜೊತೆಗಿತ್ತು ಅವಿನಾಭಾವ ಸಂಬಂಧ..!

Suvarna News   | Asianet News
Published : Dec 10, 2021, 12:34 PM ISTUpdated : Dec 10, 2021, 12:57 PM IST

 ಜ| ರಾವತ್‌ ಜೀಗೂ (Bipin Rawat) ಕೊಡಗು (Kodagu)  ಜಿಲ್ಲೆಗೂ ಅವಿನಾಭವ ಸಂಬಂಧವಿದೆ. ಜಿಲ್ಲೆಗೆ ಮೂರು ಬಾರಿ ಭೇಟಿ ನೀಡಿದ್ದ ಜನರಲ್‌ ಬಿಪಿನ್‌ ರಾವತ್‌ ಮಡಿಕೇರಿಯ ಜನರಲ್‌ ತಿಮ್ಮಯ್ಯ ಮ್ಯೂಸಿಯಂಗೆ ತಮ್ಮದೇ ಆದ ಕೊಡುಗೆ ನೀಡಿದ್ದರು.

ಬೆಂಗಳೂರು (ಡಿ. 10): ಹೆಲಿಕಾಪ್ಟರ್ ದುರಂತದಲ್ಲಿ (IAF Chopper Crash) ದುರ್ಮರಣವನ್ನಪ್ಪಿದ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್‌ಗೆ (Bipin Rawat) ಇಡೀ ದೇಶ ಕಂಬನಿ ಮಿಡಿದಿದೆ. ಶತ್ರುಗಳ ಎದೆಯಲ್ಲಿ ನಡುಕ ಹುಟ್ಟಿಸಿದ ವೀರ ಸೇನಾನಿಯನ್ನು ಕಳೆದುಕೊಂಡು ಇಡೀ ದೇಶ ಬಡವಾಗಿದೆ. ರಾವತ್‌ ಜೀಗೂ ಕೊಡಗು (Kodagu) ಜಿಲ್ಲೆಗೂ ಅವಿನಾಭವ ಸಂಬಂಧವಿದೆ. ಜಿಲ್ಲೆಗೆ ಮೂರು ಬಾರಿ ಭೇಟಿ ನೀಡಿದ್ದ ಜನರಲ್‌ ಬಿಪಿನ್‌ ರಾವತ್‌ ಮಡಿಕೇರಿಯ (Madikeri) ಜನರಲ್‌ ತಿಮ್ಮಯ್ಯ ಮ್ಯೂಸಿಯಂಗೆ (Gen Thimmaih)  ತಮ್ಮದೇ ಆದ ಕೊಡುಗೆ ನೀಡಿದ್ದರು. ಅವರ ನಿಧನ ಕೊಡಗು ಜಿಲ್ಲೆಯಲ್ಲೂ ಆಘಾತ ಉಂಟು ಮಾಡಿದ್ದು, ಜಿಲ್ಲೆಯ ಸೇನಾನಿಗಳು ಕಂಬನಿ ಮಿಡಿದಿದ್ದಾರೆ.

ಕೊಡಗಿನ ಸೈನಿಕ ಪರಂಪರೆಯ ಬಗ್ಗೆ ಮೆಚ್ಚುಗೆ ಹೊಂದಿದ್ದ ಅವರಿಗೆ ಫೀ.ಮಾ.ಕೆ.ಎಂ.ಕಾರ್ಯಪ್ಪ (K M Karyappa) ಹಾಗೂ ಜನರಲ್‌ ತಿಮ್ಮಯ್ಯ ಬಗ್ಗೆ ಅಪಾರ ಅಭಿಮಾನವಿತ್ತು. ಅಧಿಕೃತವಾಗಿ 3 ಬಾರಿ (2016, 2017 ಹಾಗೂ 2021) ಜಿಲ್ಲೆಗೆ ಭೇಟಿ ನೀಡಿದ್ದರು. ಅಲ್ಲದೆ 2021ರ ಫೆ.6ರಂದು ಜ.ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಯ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಕೊಡಗಿಗೆ ಬರಲು ರಾವತ್‌ ಕಾರಣರಾಗಿದ್ದರು.

ಜಿಲ್ಲೆಯಲ್ಲಿನ ಹಿರಿಯ ಸೇನಾಧಿಕಾರಿಗಳಾದ ಲೆ.ಜ.ಬಿ.ಸಿ.ನಂದ, ಲೆ.ಜ.ಸೋಮಣ್ಣ ಹಾಗೂ ಫೀ.ಮಾ.ಕೆ.ಎಂ.ಕಾರ್ಯಪ್ಪ, ಜ.ತಿಮ್ಮಯ್ಯ ಫೋರಂನ ಅಧ್ಯಕ್ಷ ಕರ್ನಲ್‌ ಸುಬ್ಬಯ್ಯ ಹಾಗೂ ಸಂಚಾಲಕ ಮೇಜರ್‌ ಬಿದ್ದಂಡ ನಂಜಪ್ಪ ಅವರೊಂದಿಗೆ ಹೆಚ್ಚಿನ ಬಾಂಧವ್ಯ ಹೊಂದಿದ್ದರು. ಜ.ತಿಮ್ಮಯ್ಯ ಮ್ಯೂಸಿಯಂಗೆ ಯುದ್ಧ ಟ್ಯಾಂಕ್‌, ಉಪಕರಣಗಳನ್ನು ಕಳುಹಿಸಿಕೊಟ್ಟಿದ್ದಷ್ಟೇ ಅಲ್ಲದೆ .10 ಲಕ್ಷ ನೀಡಿದ್ದರು. ಜಿಲ್ಲೆಯಲ್ಲಿ ವಾರ್‌ ಮೆಮೋರಿಯಲ್‌ ನಿರ್ಮಾಣ ವೇಳೆಯೂ ಬಿಪಿನ್‌ .5 ಲಕ್ಷ ನೀಡಿದ್ದರು ಎಂದು ಮಾಹಿತಿ ನೀಡಿದರು.

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more