Salute to Bipin Rawat: ಅಪ್ರತಿಮ ಸೇನಾಧಿಕಾರಿಗೆ ಕೊಡಗಿನ ಜೊತೆಗಿತ್ತು ಅವಿನಾಭಾವ ಸಂಬಂಧ..!

Salute to Bipin Rawat: ಅಪ್ರತಿಮ ಸೇನಾಧಿಕಾರಿಗೆ ಕೊಡಗಿನ ಜೊತೆಗಿತ್ತು ಅವಿನಾಭಾವ ಸಂಬಂಧ..!

Suvarna News   | Asianet News
Published : Dec 10, 2021, 12:34 PM ISTUpdated : Dec 10, 2021, 12:57 PM IST

 ಜ| ರಾವತ್‌ ಜೀಗೂ (Bipin Rawat) ಕೊಡಗು (Kodagu)  ಜಿಲ್ಲೆಗೂ ಅವಿನಾಭವ ಸಂಬಂಧವಿದೆ. ಜಿಲ್ಲೆಗೆ ಮೂರು ಬಾರಿ ಭೇಟಿ ನೀಡಿದ್ದ ಜನರಲ್‌ ಬಿಪಿನ್‌ ರಾವತ್‌ ಮಡಿಕೇರಿಯ ಜನರಲ್‌ ತಿಮ್ಮಯ್ಯ ಮ್ಯೂಸಿಯಂಗೆ ತಮ್ಮದೇ ಆದ ಕೊಡುಗೆ ನೀಡಿದ್ದರು.

ಬೆಂಗಳೂರು (ಡಿ. 10): ಹೆಲಿಕಾಪ್ಟರ್ ದುರಂತದಲ್ಲಿ (IAF Chopper Crash) ದುರ್ಮರಣವನ್ನಪ್ಪಿದ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್‌ಗೆ (Bipin Rawat) ಇಡೀ ದೇಶ ಕಂಬನಿ ಮಿಡಿದಿದೆ. ಶತ್ರುಗಳ ಎದೆಯಲ್ಲಿ ನಡುಕ ಹುಟ್ಟಿಸಿದ ವೀರ ಸೇನಾನಿಯನ್ನು ಕಳೆದುಕೊಂಡು ಇಡೀ ದೇಶ ಬಡವಾಗಿದೆ. ರಾವತ್‌ ಜೀಗೂ ಕೊಡಗು (Kodagu) ಜಿಲ್ಲೆಗೂ ಅವಿನಾಭವ ಸಂಬಂಧವಿದೆ. ಜಿಲ್ಲೆಗೆ ಮೂರು ಬಾರಿ ಭೇಟಿ ನೀಡಿದ್ದ ಜನರಲ್‌ ಬಿಪಿನ್‌ ರಾವತ್‌ ಮಡಿಕೇರಿಯ (Madikeri) ಜನರಲ್‌ ತಿಮ್ಮಯ್ಯ ಮ್ಯೂಸಿಯಂಗೆ (Gen Thimmaih)  ತಮ್ಮದೇ ಆದ ಕೊಡುಗೆ ನೀಡಿದ್ದರು. ಅವರ ನಿಧನ ಕೊಡಗು ಜಿಲ್ಲೆಯಲ್ಲೂ ಆಘಾತ ಉಂಟು ಮಾಡಿದ್ದು, ಜಿಲ್ಲೆಯ ಸೇನಾನಿಗಳು ಕಂಬನಿ ಮಿಡಿದಿದ್ದಾರೆ.

ಕೊಡಗಿನ ಸೈನಿಕ ಪರಂಪರೆಯ ಬಗ್ಗೆ ಮೆಚ್ಚುಗೆ ಹೊಂದಿದ್ದ ಅವರಿಗೆ ಫೀ.ಮಾ.ಕೆ.ಎಂ.ಕಾರ್ಯಪ್ಪ (K M Karyappa) ಹಾಗೂ ಜನರಲ್‌ ತಿಮ್ಮಯ್ಯ ಬಗ್ಗೆ ಅಪಾರ ಅಭಿಮಾನವಿತ್ತು. ಅಧಿಕೃತವಾಗಿ 3 ಬಾರಿ (2016, 2017 ಹಾಗೂ 2021) ಜಿಲ್ಲೆಗೆ ಭೇಟಿ ನೀಡಿದ್ದರು. ಅಲ್ಲದೆ 2021ರ ಫೆ.6ರಂದು ಜ.ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಯ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಕೊಡಗಿಗೆ ಬರಲು ರಾವತ್‌ ಕಾರಣರಾಗಿದ್ದರು.

ಜಿಲ್ಲೆಯಲ್ಲಿನ ಹಿರಿಯ ಸೇನಾಧಿಕಾರಿಗಳಾದ ಲೆ.ಜ.ಬಿ.ಸಿ.ನಂದ, ಲೆ.ಜ.ಸೋಮಣ್ಣ ಹಾಗೂ ಫೀ.ಮಾ.ಕೆ.ಎಂ.ಕಾರ್ಯಪ್ಪ, ಜ.ತಿಮ್ಮಯ್ಯ ಫೋರಂನ ಅಧ್ಯಕ್ಷ ಕರ್ನಲ್‌ ಸುಬ್ಬಯ್ಯ ಹಾಗೂ ಸಂಚಾಲಕ ಮೇಜರ್‌ ಬಿದ್ದಂಡ ನಂಜಪ್ಪ ಅವರೊಂದಿಗೆ ಹೆಚ್ಚಿನ ಬಾಂಧವ್ಯ ಹೊಂದಿದ್ದರು. ಜ.ತಿಮ್ಮಯ್ಯ ಮ್ಯೂಸಿಯಂಗೆ ಯುದ್ಧ ಟ್ಯಾಂಕ್‌, ಉಪಕರಣಗಳನ್ನು ಕಳುಹಿಸಿಕೊಟ್ಟಿದ್ದಷ್ಟೇ ಅಲ್ಲದೆ .10 ಲಕ್ಷ ನೀಡಿದ್ದರು. ಜಿಲ್ಲೆಯಲ್ಲಿ ವಾರ್‌ ಮೆಮೋರಿಯಲ್‌ ನಿರ್ಮಾಣ ವೇಳೆಯೂ ಬಿಪಿನ್‌ .5 ಲಕ್ಷ ನೀಡಿದ್ದರು ಎಂದು ಮಾಹಿತಿ ನೀಡಿದರು.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more