Salute to Bipin Rawat: ಅಪ್ರತಿಮ ಸೇನಾಧಿಕಾರಿಗೆ ಕೊಡಗಿನ ಜೊತೆಗಿತ್ತು ಅವಿನಾಭಾವ ಸಂಬಂಧ..!

Salute to Bipin Rawat: ಅಪ್ರತಿಮ ಸೇನಾಧಿಕಾರಿಗೆ ಕೊಡಗಿನ ಜೊತೆಗಿತ್ತು ಅವಿನಾಭಾವ ಸಂಬಂಧ..!

Suvarna News   | Asianet News
Published : Dec 10, 2021, 12:34 PM ISTUpdated : Dec 10, 2021, 12:57 PM IST

 ಜ| ರಾವತ್‌ ಜೀಗೂ (Bipin Rawat) ಕೊಡಗು (Kodagu)  ಜಿಲ್ಲೆಗೂ ಅವಿನಾಭವ ಸಂಬಂಧವಿದೆ. ಜಿಲ್ಲೆಗೆ ಮೂರು ಬಾರಿ ಭೇಟಿ ನೀಡಿದ್ದ ಜನರಲ್‌ ಬಿಪಿನ್‌ ರಾವತ್‌ ಮಡಿಕೇರಿಯ ಜನರಲ್‌ ತಿಮ್ಮಯ್ಯ ಮ್ಯೂಸಿಯಂಗೆ ತಮ್ಮದೇ ಆದ ಕೊಡುಗೆ ನೀಡಿದ್ದರು.

ಬೆಂಗಳೂರು (ಡಿ. 10): ಹೆಲಿಕಾಪ್ಟರ್ ದುರಂತದಲ್ಲಿ (IAF Chopper Crash) ದುರ್ಮರಣವನ್ನಪ್ಪಿದ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್‌ಗೆ (Bipin Rawat) ಇಡೀ ದೇಶ ಕಂಬನಿ ಮಿಡಿದಿದೆ. ಶತ್ರುಗಳ ಎದೆಯಲ್ಲಿ ನಡುಕ ಹುಟ್ಟಿಸಿದ ವೀರ ಸೇನಾನಿಯನ್ನು ಕಳೆದುಕೊಂಡು ಇಡೀ ದೇಶ ಬಡವಾಗಿದೆ. ರಾವತ್‌ ಜೀಗೂ ಕೊಡಗು (Kodagu) ಜಿಲ್ಲೆಗೂ ಅವಿನಾಭವ ಸಂಬಂಧವಿದೆ. ಜಿಲ್ಲೆಗೆ ಮೂರು ಬಾರಿ ಭೇಟಿ ನೀಡಿದ್ದ ಜನರಲ್‌ ಬಿಪಿನ್‌ ರಾವತ್‌ ಮಡಿಕೇರಿಯ (Madikeri) ಜನರಲ್‌ ತಿಮ್ಮಯ್ಯ ಮ್ಯೂಸಿಯಂಗೆ (Gen Thimmaih)  ತಮ್ಮದೇ ಆದ ಕೊಡುಗೆ ನೀಡಿದ್ದರು. ಅವರ ನಿಧನ ಕೊಡಗು ಜಿಲ್ಲೆಯಲ್ಲೂ ಆಘಾತ ಉಂಟು ಮಾಡಿದ್ದು, ಜಿಲ್ಲೆಯ ಸೇನಾನಿಗಳು ಕಂಬನಿ ಮಿಡಿದಿದ್ದಾರೆ.

ಕೊಡಗಿನ ಸೈನಿಕ ಪರಂಪರೆಯ ಬಗ್ಗೆ ಮೆಚ್ಚುಗೆ ಹೊಂದಿದ್ದ ಅವರಿಗೆ ಫೀ.ಮಾ.ಕೆ.ಎಂ.ಕಾರ್ಯಪ್ಪ (K M Karyappa) ಹಾಗೂ ಜನರಲ್‌ ತಿಮ್ಮಯ್ಯ ಬಗ್ಗೆ ಅಪಾರ ಅಭಿಮಾನವಿತ್ತು. ಅಧಿಕೃತವಾಗಿ 3 ಬಾರಿ (2016, 2017 ಹಾಗೂ 2021) ಜಿಲ್ಲೆಗೆ ಭೇಟಿ ನೀಡಿದ್ದರು. ಅಲ್ಲದೆ 2021ರ ಫೆ.6ರಂದು ಜ.ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಯ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಕೊಡಗಿಗೆ ಬರಲು ರಾವತ್‌ ಕಾರಣರಾಗಿದ್ದರು.

ಜಿಲ್ಲೆಯಲ್ಲಿನ ಹಿರಿಯ ಸೇನಾಧಿಕಾರಿಗಳಾದ ಲೆ.ಜ.ಬಿ.ಸಿ.ನಂದ, ಲೆ.ಜ.ಸೋಮಣ್ಣ ಹಾಗೂ ಫೀ.ಮಾ.ಕೆ.ಎಂ.ಕಾರ್ಯಪ್ಪ, ಜ.ತಿಮ್ಮಯ್ಯ ಫೋರಂನ ಅಧ್ಯಕ್ಷ ಕರ್ನಲ್‌ ಸುಬ್ಬಯ್ಯ ಹಾಗೂ ಸಂಚಾಲಕ ಮೇಜರ್‌ ಬಿದ್ದಂಡ ನಂಜಪ್ಪ ಅವರೊಂದಿಗೆ ಹೆಚ್ಚಿನ ಬಾಂಧವ್ಯ ಹೊಂದಿದ್ದರು. ಜ.ತಿಮ್ಮಯ್ಯ ಮ್ಯೂಸಿಯಂಗೆ ಯುದ್ಧ ಟ್ಯಾಂಕ್‌, ಉಪಕರಣಗಳನ್ನು ಕಳುಹಿಸಿಕೊಟ್ಟಿದ್ದಷ್ಟೇ ಅಲ್ಲದೆ .10 ಲಕ್ಷ ನೀಡಿದ್ದರು. ಜಿಲ್ಲೆಯಲ್ಲಿ ವಾರ್‌ ಮೆಮೋರಿಯಲ್‌ ನಿರ್ಮಾಣ ವೇಳೆಯೂ ಬಿಪಿನ್‌ .5 ಲಕ್ಷ ನೀಡಿದ್ದರು ಎಂದು ಮಾಹಿತಿ ನೀಡಿದರು.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more