ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

Suvarna News   | Asianet News
Published : Jun 06, 2020, 02:33 PM IST

ಮೇ.30ರಂದು ಸುವರ್ಣ ನ್ಯೂಸ್ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎನ್ನುವುದರ ಬಗ್ಗೆ ವಿಸ್ತೃತವಾದ ತನಿಖಾ ವರದಿ ಮೂಲಕ ಗಮನ ಸೆಳೆದಿತ್ತು. ಈ ವರದಿಗೆ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಬೆಂಗಳೂರು(ಜೂ.06): ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಂದ ದುಬಾರಿ ಹಣ ವಸೂಲಿ ಮಾಡುವ ಬಗ್ಗೆ ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಷನ್ ಮಾಡಿ ಈ ಭ್ರಷ್ಟಾಚಾರವನ್ನು ಹೊರಗೆಳೆದಿತ್ತು. ಇದರ ಬೆನ್ನಲ್ಲೇ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

ಹೌದು, ಮೇ.30ರಂದು ಸುವರ್ಣ ನ್ಯೂಸ್ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎನ್ನುವುದರ ಬಗ್ಗೆ ವಿಸ್ತೃತವಾದ ತನಿಖಾ ವರದಿ ಮೂಲಕ ಗಮನ ಸೆಳೆದಿತ್ತು. ಈ ವರದಿಗೆ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಈ ವಿಚಾರ ಆರೋಗ್ಯ ಸಚಿವ ಬಿ ಶ್ರೀರಾಮುಲು ಗಮನಕ್ಕೆ ಬರುತ್ತಿದ್ದಂತೆ ಖಾಸಗಿ ಆಸ್ಪತ್ರೆಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಹಣ ಸುಲಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಖಾಸಗಿ ಆಸ್ಪತ್ರೆಗಳಿಗೆ ಶುಲ್ಕ ನಿಗದಿ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಶ್ರೀರಾಮುಲು ಹೇಳಿದ್ದಾರೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!