ಮಾಲ್, ಸೂಪರ್ ಮಾರ್ಕೆಟ್‌ಗಳಲ್ಲೂ ಸಿಗುತ್ತಾ ಎಣ್ಣೆ..? ಸರ್ಕಾರದ  ಚಿಂತನೆಗೆ ಬಾರ್ ಮಾಲೀಕರ ಅಸಮಾಧಾನ!

ಮಾಲ್, ಸೂಪರ್ ಮಾರ್ಕೆಟ್‌ಗಳಲ್ಲೂ ಸಿಗುತ್ತಾ ಎಣ್ಣೆ..? ಸರ್ಕಾರದ ಚಿಂತನೆಗೆ ಬಾರ್ ಮಾಲೀಕರ ಅಸಮಾಧಾನ!

Published : Sep 08, 2023, 11:03 AM IST

ಗ್ಯಾರಂಟಿಗಳ ಮಧ್ಯೆ ಆರ್ಥಿಕ ಸ್ಥಿತಿ ಸುಧಾರಣೆಗೆ ಹೊಸ ಪ್ಲಾನ್  ಸಿದ್ಧಗೊಂಡಿದೆ. ಅದೇನಪ್ಪಾ ಅಂದ್ರೆ ಇನ್ಮುಂದೆ ಮಾಲ್, ಸೂಪರ್ ಮಾರ್ಕೆಟ್‌ನಲ್ಲೂ ಮದ್ಯ ಮಾರಾಟಕ್ಕೆ ಚಿಂತನೆ ನಡೆಸಲಾಗಿದೆ. ಆದ್ರೆ ಈ ನಿರ್ಧಾರಕ್ಕೆ ಬಾರ್ ಆಂಡ್ ಪಬ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಸದ್ಯ ಗೊಂದಲಕ್ಕೀಡು ಮಾಡಿದೆ.
 

ಗ್ಯಾರಂಟಿಗಳ ಮಧ್ಯೆ ಆರ್ಥಿಕ ಸ್ಥಿತಿ ಸುಧಾರಣೆಗೆ ಸರ್ಕಾರ ಹೊಸ ಪ್ಲಾನ್ ಜಾರಿಗೆ ತರಲು ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇನ್ಮುಂದೆ ಮಾಲ್, ಸೂಪರ್ ಮಾರ್ಕೆಟ್‌ನಲ್ಲೂ(super market) ಮದ್ಯ ಮಾರಾಟಕ್ಕೆ ಅವಕಾಶ ಕೊಟ್ರೆ ಸರ್ಕಾರದ ಖಜಾನೆ ತುಂಬಿಸಬಹುದು ಅನ್ನೋ ಯೋಚನೆಯಿದೆಯಂತೆ. ಈ ಬಗ್ಗೆ ಈಗಾಗಲೇ ಒಂದು ಸುತ್ತಿನ ಸಭೆ ಕೂಡ ನಡೆದಿದ್ದು, ಇದೆ ವಾರದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ಅಬಕಾರಿ ಇಲಾಖೆ(Excise Department) ಸಿದ್ದತೆ ನಡೆಸಿದೆ. ಮಾಲ್ ,ಪಬ್‌ಗಳಿಗೆ ಮದ್ಯ ಲೈಸನ್ಸ್  ಕೊಡುವ ಜೊತೆಗೆ, ಲೈಸನ್ಸ್ ಬದಲಾವಣೆಗೆ ಶೇ.5 ರಷ್ಟು ಶುಲ್ಕ ಏರಿಕೆಗೂ ಪ್ಲ್ಯಾನ್ ನಡೆಸಿದಿಯಂತೆ. ಮಾಲ್(Mall)  ಹಾಗೂ ಸೂಪರ್ ಮಾರ್ಕೆಟ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲು ಚಿಂತನೆ ನಡೆಸಿದ್ದು, ಬಾರ್ ಹಾಗೂ ಪಬ್ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ. ಜೊತೆಗೆ ಈಗಾಗಲೇ ಸುಂಕ ಹೆಚ್ಚಿಸಿದ್ದರಿಂದ ಶೇ. 20% ಮದ್ಯ ಮಾರಾಟ ಕುಸಿತವಾಗಿದೆ. ಈಗ ಹೊಸ ಬಾರ್ ಪಬ್‌ಗಳ ಜೊತೆಗೆ ಮಾಲ್‌ಗಳಿಗೂ ಅವಕಾಶ ನೀಡಿದ್ರೆ ನಮ್ಮ ಕತೆ ಏನು ಅನ್ನೋದು ಇವರ ವಾದವಾಗಿದೆ.

ಇದನ್ನೂ ವೀಕ್ಷಿಸಿ:  ಖತರ್ನಾಕ್‌ ಖದೀಮರ ಬ್ಲ್ಯಾಕ್‌ ಆಂಡ್‌ ವೈಟ್‌ ಮನಿ ದಂಧೆ: 20 ಲಕ್ಷಕ್ಕೆ 1 ಕೋಟಿ ಆಸೆಗೆ ಬಿದ್ದವನಿಗೆ ಪಂಗನಾಮ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!