ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅಂತರ್ ಕಾಲೇಜು, ವಿವಿ ಬದಲಾವಣೆಗೆ ಅಸ್ತು

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅಂತರ್ ಕಾಲೇಜು, ವಿವಿ ಬದಲಾವಣೆಗೆ ಅಸ್ತು

Published : Oct 27, 2023, 11:25 AM IST

ಕಾಲೇಜಿನಿಂದ ಕಾಲೇಜಿಗೆ ಹಾಗೂ ವಿವಿಯಿಂದ ಮತ್ತೊಂದು ವಿವಿಗೆ ಸೇರಿಕೊಳ್ಳಲು ಪದವಿ ವಿದ್ಯಾರ್ಥಿಗಳು ಹರಸಾಹಸ ಪಡಬೇಕಿತ್ತು.. ಆದ್ರೆ ಇದೀಗ ಇಂಟರ್ ಯೂನಿವರ್ಸಿಟಿ, ಕಾಲೇಜು ವರ್ಗಾವಣೆಗೆ ಉನ್ನತ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಕೆಲ ವಿವಿಗಳು ಆದೇಶ ಪಾಲಿಸಿದ್ರೆ, ಮತ್ತೆ ಕೆಲ ವಿವಿಗಳು ವಿದ್ಯಾರ್ಥಿಗಳಿಗೆ ಕಾಲೇಜು ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡುತ್ತಿಲ್ಲ.
 

ಪದವಿ ಓದುತ್ತಿರೋ ವಿದ್ಯಾರ್ಥಿಗಳು ಅನಿವಾರ್ಯ ಕಾರಣಗಳಿಗೆ ಕಾಲೇಜು ಬದಲಾಯಿಸಬೇಕಾದ ಸನ್ನಿವೇಶ ಬರುತ್ತೆ. ಒಮ್ಮೆ ಪದವಿ ಆರಂಭವಾದಮೇಲೆ ಅದೇ ಕೋರ್ಸ್ಗೆ ಮತ್ತೊಂದು ಕಾಲೇಜು(College) ಅಥವಾ ವಿವಿ ಸೇರೋದು ಕಷ್ಟವಾಗಿತ್ತು. ಆದ್ರೀಗ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಉನ್ನತ ಶಿಕ್ಷಣ ಇಲಾಖೆ ಪರಿಹಾರ ನೀಡಿದೆ. ಅಂತರ್ ಕಾಲೇಜು ವರ್ಗಾವಣೆಗೆ ಅಸ್ತು ಎಂದಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ(Bengaluru University) ಅಂತರ್ ಕಾಲೇಜು ಹಾಗೂ ಯೂನಿವರ್ಸಿಟಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಮೊದಲ ಸೆಮಿಸ್ಟರ್ ಹಾಗೂ ಎರಡನೇ ಸೆಮಿಸ್ಟರ್ ಬೆಂಗಳೂರು ವಿವಿಯಲ್ಲಿ ವ್ಯಾಸಂಗ ಮಾಡಿದ್ದು, ನಂತರ‌ ಮೂರನೇ ಸೆಮಿಸ್ಟರ್ಗೆ ‌ಮತ್ತೊಂದು ವಿವಿಗೆ ಸೇರಿಕೊಳ್ಳಲು ಈ ಹಿಂದೆ ಅವಕಾಶ ಇರಲಿಲ್ಲ. ಇದೀಗ ಕಾಯಿದೆ ತಿದ್ದುಪಡಿ ತಂದಿದ್ದು, ಇಂಟರ್ ಯೂನಿವರ್ಸಿಟಿ ಹಾಗೂ ಅಂತರ್ ಕಾಲೇಜು ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಬೆಂಗಳೂರು ವಿವಿ ಪರೀಕ್ಷಾ ವಿಭಾಗದ ರಿಜಿಸ್ಟರ್ ಡಾ.ಶ್ರೀನಿವಾಸ್ ಹೇಳಿದ್ದಾರೆ. ಎಲ್ಲರೂ ಇಂಟರ್ ವಿವಿ ಬದಲಾವಣೆ ಮಾಡಿಕೊಳ್ಳೋದಕ್ಕೆ ಆಗಲ್ಲ. ಹಿಂದಿನ ವಿವಿ ಮತ್ತು ಈಗ ಸೇರುವ ವಿವಿ ಎರಡರಲ್ಲೂ ಪದವಿ ವಿಷಯ ಒಂದೇ ಆಗಿದ್ದರೆ, ಯಾವುದೇ ಚಿಂತೆಯಿಲ್ಲದೆ ವಿವಿ ಬದಲಾವಣೆ ಮಾಡಬಹುದು. ಬೆಂಗಳೂರು ವಿವಿಗೆ ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳು(graduate students) ‌ಬೇರೆ ವಿಶ್ವವಿದ್ಯಾಲಯಗಳಿಂದ ವರ್ಗಾವಣೆ ಪಡೆದು ದಾಖಲಾತಿ ಪಡೆದುಕೊಂಡಿದ್ದಾರೆ. ಆದ್ರೆ ಬೆಂಗಳೂರು ಹೊರತು ಪಡಿಸಿ ಮಂಡ್ಯ ಹಾಗೂ ತುಮಕೂರು ವಿವಿಯಲ್ಲಿ ಅಂತರ್ ಕಾಲೇಜು ವರ್ಗಾವಣೆ ವಿಚಾರದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಮಂಡ್ಯ ವಿವಿಯಿಂದ ತುಮಕೂರು ವಿವಿಗೆ ಅಂತರ್ ಕಾಲೇಜು ವರ್ಗಾವಣೆ ಕೊಡುತ್ತಿಲ್ಲ. ಹಿಂದಿನ ಸೆಮಿಸ್ಟರ್ ‌ಫಲಿತಾಂಶ ಬಾರದೆ ನಾವು ವರ್ಗಾವಣೆ ಕೊಡೋದಿಲ್ಲ ಎಂದಿದ್ದಾರಂತೆ. ಆದ್ರೆ ಪರೀಕ್ಷೆ ಬರೆದು ಎಂಟು ತಿಂಗಳೂ‌ ಕಳೆದ್ರು ಮಂಡ್ಯ ವಿವಿಯಲ್ಲಿ ಫಲಿತಾಂಶ ಬಂದಿಲ್ಲ.. ಹೀಗಾಗಿ ವಿದ್ಯಾರ್ಥಿಗಳಿಗೆ ಕಾಲೇಜು ವರ್ಗಾವಣೆ ಸಿಗದೆ ಸಾಕಷ್ಟು ಸಮಸ್ಯೆಯಾಗಿದೆ ಅಂತಾರೆ ಪೋಷಕರು.

ಇದನ್ನೂ ವೀಕ್ಷಿಸಿ:  ಕರೆಂಟ್ ಕಣ್ಣಾಮುಚ್ಚಾಲೆಗೆ ಹೈರಾಣಾದ ರೈತರು: ಬೆಳೆ ಉಳಿಸಿಕೊಳ್ಳಲು ಹರಸಾಹಸ

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more