ಮಣಿಪುರಕ್ಕೆ ಹೋಗದ ನೀವು ಇಸ್ರೇಲ್‌ಗೆ ಹೋಗಿದ್ದೇಕೆ? ಟ್ರೋಲ್‌ಗೆ ಅಜಿತ್‌ ಹನಮಕ್ಕನವರ್‌ ಉತ್ತರ

ಮಣಿಪುರಕ್ಕೆ ಹೋಗದ ನೀವು ಇಸ್ರೇಲ್‌ಗೆ ಹೋಗಿದ್ದೇಕೆ? ಟ್ರೋಲ್‌ಗೆ ಅಜಿತ್‌ ಹನಮಕ್ಕನವರ್‌ ಉತ್ತರ

Published : Oct 19, 2023, 07:27 PM IST

ಏಷ್ಯಾನೆಟ್‌ ಸುವರ್ಣನ್ಯೂಸ್‌ ಹಾಗೂ ಕನ್ನಡಪ್ರಭ ಪ್ರತಿನಿಧಿಯಾಗಿ ಇಸ್ರೇಲ್‌ ಯುದ್ಧಭೂಮಿಗೆ ತೆರಳಿರುವ ಸಂಪಾದಕ ಅಜಿತ್‌ ಹನಮಕ್ಕನವರ್‌ ಟ್ರೋಲಿಗರಿಗೂ ಆಹಾರವಾಗಿದ್ದರು. ಪಕ್ಕದ ಮಣಿಪುರಕ್ಕೆ ಹೋಗದ ಇವರು ಇಸ್ರೇಲ್‌ ಹೋಗಿದ್ದಾರೆ ಎನ್ನುವ ಅರ್ಥದಲ್ಲಿ ಬಂದ ಟೀಕೆಗೆ ಇಸ್ರೇಲ್‌ನಿಂದಲೇ ಉತ್ತರ ನೀಡಿದ್ದಾರೆ.

ಬೆಂಗಳೂರು (ಅ.19): 'ಮಣಿಪುರ ಎನ್ನುವುದು ಒಂದು ರಾಷ್ಟ್ರದ ಒಳಗಿನ ಹಿಂಸಾಚಾರ.ಆದರೆ, ಇಸ್ರೇಲ್‌ನಲ್ಲಿ ಎರಡು ರಾಷ್ಟ್ರಗಳ ನಡುವಿನ ಯುದ್ಧ. ಅದಕ್ಕಿತ ಹೆಚ್ಚಾಗಿ ಇಸ್ರೇಲ್‌ ನನ್ನ ಆಸಕ್ತಿಕರ ವಿಚಾರ..' ಎಂದು ಏಷ್ಯಾನೆಟ್‌ ಸುವರ್ಣನ್ಯೂಸ್ ಪ್ರಧಾನ ಸಂಪಾದಕ ಅಜಿತ್‌ ಹನಮಕ್ಕನವರ್‌ ಹೇಳಿದ್ದಾರೆ. ಪಕ್ಕದ ಮಣಿಪುರಕ್ಕೆ ಹೋಗಲು ಸಾಧ್ಯವಾಗದ ಅಜಿತ್‌ ಹನಮಕ್ಕನವರ್‌, ಇಸ್ರೇಲ್‌ ಯುದ್ಧಭೂಮಿಗೆ ತೆರಳಿ ವರದಿ ಮಾಡುತ್ತಿದ್ದಾರೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್‌ ಆಗುತ್ತಿದ್ದವು. ಅದಕ್ಕೆ ಇಸ್ರೇಲ್‌ ಯುದ್ಧಭೂಮಿಯಿಂದಲೇ ಅಜಿತ್‌ ಉತ್ತರ ನೀಡಿದ್ದಾರೆ.

ರಾಜಕೀಯ ಬೇಳೆ ಬೇಯಿಸಿಕೊಳ್ಳುವವರಿಗೆ ಮಾತ್ರವೇ ಮಣಿಪುರ ಎನ್ನುವುದು ವಿಷಯ. ಮಣಿಪುರದ ಬಗ್ಗೆ ಕೇಳ್ತಾ ಇರೋ ಇದೇ ಜನರಿಗೆ ಕಾಶ್ಮೀರದಲ್ಲಿ ಆಗಿರುವ ವಿಚಾರಗಳನ್ನು ಕೇಳಿ ನೋಡಿ. ಅಲ್ಲಿನ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅನ್ನೋದನ್ನು ಕೇಳಿ ನೋಡಿ ಅವರಲ್ಲಿ ಉತ್ತರವೇ ಇರೋದಿಲ್ಲ. ಸಂಪೂರ್ಣವಾಗಿ ಮೌನಕ್ಕೆ ಶರಣಾಗುತ್ತಾರೆ ಎಂದು ಹೇಳಿದೆ.

ಇಸ್ರೇಲಿನ ಬೀದಿ ಬೀದಿಯಲ್ಲಿ ಸುವರ್ಣ ಸಂಚಾರ..! ಗಾಜಾ ಗಡಿಯಿಂದ ಕೂಗಳತೆ ದೂರದಲ್ಲಿ ವರದಿ

ಕಾಶ್ಮೀರದ ಬಗ್ಗೆ ಮಾತನಾಡುವುದು ಹೋಗಲಿ, ಅಲ್ಲಿನ ಜನರು ಎದುರಿಸಿದ ಸಮಸ್ಯೆಗಳ ಬಗ್ಗೆ ಬಂದ ಚಿತ್ರವನ್ನೂ ದ್ವೇಷ ಮಾಡುವಂಥ ಜನ ಇವರು. ಹಾಗಾಗಿ ಅವರ ಟೀಕೆಗಳನ್ನು ಎಂದಿಗೂ ನಾನು ಕೇಳಿಸಿಕೊಂಡಿಲ್ಲ. ಅದಲ್ಲದೆ, ಇಸ್ರೇಲ್‌ ಎನ್ನುವುದು ಮೊದಲಿನಿಂದಲೂ ನನ್ನ ಆಸಕ್ತಿಕರ ವಿಚಾರ. ಈ ನಾಡಿನ ಬಗ್ಗೆ ಹಲವು ಪುಸ್ತಕಗಳನ್ನು ಓದಿದ್ದೇನೆ, ಅಧ್ಯಯನ ಮಾಡಿದ್ದೇನೆ ಎಂದು ಅಜಿತ್‌ ಹನಮಕ್ಕನವರ್‌ ಹೇಳಿದ್ದಾರೆ.

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more