ಹುಬ್ಬಳ್ಳಿ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಗೆ ಇನ್ಸ್‌ಸ್ಪೆಕ್ಟರ್‌ನಿಂದ ಲೈಂಗಿಕ ಕಿರುಕುಳ?

ಹುಬ್ಬಳ್ಳಿ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಗೆ ಇನ್ಸ್‌ಸ್ಪೆಕ್ಟರ್‌ನಿಂದ ಲೈಂಗಿಕ ಕಿರುಕುಳ?

Published : Dec 17, 2024, 05:05 PM IST

ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರು ವಿರುದ್ಧ ಮಹಿಳಾ ಪೊಲೀಸ್ ಸಿಬ್ಬಂದಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವಿಡಿಯೋ ಕರೆಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ ಆಯೋಗ, ಮಾನವ ಹಕ್ಕುಗಳ ಆಯೋಗ ಮತ್ತು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ.

ಹುಬ್ಬಳ್ಳಿ (ಡಿ.17): ಮಹಿಳಾ ಪೊಲೀಸ್​ ಸಿಬ್ಬಂದಿಗೆ ಪೊಲೀಸ್ ಇನ್ಸ್​ಪೆಕ್ಟರ್​  ಲೈಂಗಿಕ ಕಿರುಕುಳ ಬಗ್ಗೆ ಆರೋಪ ಕೇಳಿಬಂದಿದೆ. ಹಳೆಹುಬ್ಬಳ್ಳಿ ಠಾಣೆ SI ಸುರೇಶ್ ವಿರುದ್ಧ  ವಿಡಿಯೋ ಕಾಲ್ ಮಾಡಿ ಕಿರುಕುಳ ಕೊಟ್ಟಿರುವ ಆರೋಪ ಕೇಳಿಬಂದಿದೆ. SI​ ಸುರೇಶ್ ಯಳ್ಳೂರು ವಿರುದ್ಧಮಹಿಳಾ ಆಯೋಗ, ಮಾನವ ಹಕ್ಕು , ಸಿಎಂಗೆ ಪತ್ರ ಬರೆಯಲಾಗಿದೆ.

ಹಳೆಹುಬ್ಬಳ್ಳಿ ಠಾಣೆ ಸಬ್ ಇನ್ಸ್‌ಸ್ಪೆಕ್ಟರ್ ಸುರೇಶ್ ವಿರುದ್ಧ ಆರೋಪ ಕೇಳಿಬಂದಿದೆ. ಮಹಿಳಾ ಆಯೋಗ, ಮಾನವ ಹಕ್ಕು ಹಾಗೂ ರಾಜ್ಯದ ಮುಖ್ಯಮಂತ್ರಿಗೂ ಪತ್ರವನ್ನು ಬರೆಯಲಾಗಿದೆ. ಇನ್ನು ಆರೋಪಿ ಸಬ್ ಇನ್ಸ್‌ಸ್ಪೆಕ್ಟರ್ ​ಸುರೇಶ್ ಯಳ್ಳೂರು ವಿರುದ್ಧ 3 ಪುಟಗಳ ದೂರು ನೀಡಲಾಗಿದೆ. ನಮ್ಮನ್ನು ಈ ಇನ್ಸ್‌ಸ್ಪೆಕ್ಟರ್ ಕಿರುಕುಳದಿಂದ ಮುಕ್ತಿ ಮಾಡುವಂತೆ ಮಹಿಳಾ ಸಿಬ್ಬಂದಿ ಮನವಿ ಮಾಡಿದ್ದಾರೆ. ಮೂರು ಪುಟಗಳಲ್ಲಿ ಇನ್ಸ್‌ಸ್ಪೆಕ್ಟರ್ ಸುರೇಶ್​ ಕಿರುಕುಳವನ್ನು ಎಳೆ ಎಳೆಯಾಗಿ  ಬಿಚ್ಚಿಟ್ಟಿದ್ದಾರೆ.

ಇನ್ನು ಠಾಣೆಯಲ್ಲಿ ನಾವು ಕೆಲಸ ಮಾಡುವಾಗ ಸರ್ಕಾರದಿಂದ ಕೊಡಲಾಗಿರುವ ರಜೆಯನ್ನು ಕೇಳಿದರೆ ನನ್ನ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ. ಇನ್ನು ನಾನು ಮನೆಗೆ ಹೋಗುತ್ತಿದ್ದಂತೆ ಹಾಗೂ ರಾತ್ರಿ ಆಗುತ್ತಿದ್ದಂತೆಯೇ ನನಗೆ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸುತ್ತಾರೆ. ಇದರಿಂದಾಗಿ ನಮ್ಮ ಕುಟುಂಬದಲ್ಲಿ ಬಿರುಕು ಮೂಡಿದೆ. ಇದೀಗ ನನ್ನ ಕೆಲಸದ ಸ್ಥಳದಲ್ಲಿ ನಡೆಯುತ್ತಿರುವ ಕಿರುಕುಳದಿಂದಾಗಿ ಇಡೀ ಜೀವನವೇ ಹಾಳಾಗುತ್ತಿದೆ ಎಂದು ಪತ್ರದ ಮೂಲಕ ಅಳಲು ತೋಡಿಕೊಂಡಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more