Harsha Murder Case : ಕಾರ್ಯಕರ್ತರನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ?

Harsha Murder Case : ಕಾರ್ಯಕರ್ತರನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ?

Published : Feb 23, 2022, 06:09 PM IST

ಸರ್ಕಾರದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್ ಡಿಕೆ ಕಿಡಿ
ಖಾಕಿ ವೈಫಲ್ಯವಲ್ಲ, ಸರ್ಕಾರದ ವೈಫಲ್ಯದ ಬಗ್ಗೆ ತನಿಖೆ ಮಾಡಿ
ನಿಮ್ಮದೇ ಕಾರ್ಯಕರ್ತರನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ ಎಂದು ಪ್ರಶ್ನೆ

ಮೈಸೂರು (ಫೆ.23): ಶಿವಮೊಗ್ಗದಲ್ಲಿ (Shivamogga) ಭಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣದಲ್ಲಿ (Harsha Murder Case ) ಸರ್ಕಾರದ ವೈಫಲ್ಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ನಿಮ್ಮದೇ ಕಾರ್ಯಕರ್ತನನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಹತ್ಯೆ ಪ್ರಕರಣದಲ್ಲಿ ಪೊಲೀಸ್ ವೈಫಲ್ಯದ ಕುರಿತಾಗಿಯೂ ತನಿಖೆ ನಡೆಯಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ (Home Minister Araga Jnanendra)ಹೇಳಿದ್ದಾರೆ. ಇದಕ್ಕೆ ಕಿಡಿಕಾರಿರುವ ಎಚ್ ಡಿಕೆ, ಇದರಲ್ಲಿ ಪೊಲೀಸರ ವೈಫಲ್ಯವಲ್ಲ, ಸರ್ಕಾರದ ವೈಫಲ್ಯದ ಬಗ್ಗೆ ತನಿಖೆ ಆಗಬೇಕು ಎಂದಿದ್ದಾರೆ. ನಿಮ್ಮ ಸರ್ಕಾರವಿದ್ದೂ ನಿಮ್ಮ ಕಾರ್ಯಕರ್ತನ ಕೊಲೆಯಾಗಿದೆ, ನಿಮ್ಮದೇ ಕಾರ್ಯಕರ್ತನನ್ನು ರಕ್ಷಿಸಿಕೊಳ್ಳಲಾಗದಿರುವ ನಿಮ್ಮದೆಂತಾ ಸರ್ಕಾರ. ಕೊಲೆ ಮಾಡಿದವರ ಮೇಲೆ ತನಿಖೆ ನಡೆಸಬೇಕು ಆದರೆ, ಇಲ್ಲಿ ಪೊಲೀಸರ ಮೇಲೆ ತನಿಖೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Harsha Murder Case: ಪಿಸ್ತೂಲ್ ಸಮೇತ ಪ್ರತಿಭಟನೆಯಲ್ಲಿ ಭಾಗಿ!
ಹಲವು ವರ್ಷಗಳಿಂದ ಹಲ್ಲೆ ಬಗ್ಗೆ ಗೊತ್ತಿದ್ದೂ ಕೊಲೆಯಾಗಿದೆ ಎಂದು ಹೇಳುತ್ತಾರೆ. ಇದಕ್ಕಾಗಿ ಸರ್ಕಾರ ಪೊಲೀಸರ ಮೇಲೆ ತನಿಖೆ ಮಾಡಲು ಹೊರಟಿದೆ. ಇದೆಲ್ಲವೂ ನಿಮ್ಮ ವೈಫಲ್ಯ. ಈಗ ಸಾಂತ್ವನ ಹೇಳಿ ಪರಿಹಾರ ನೀಡುತ್ತಿದ್ದಾರೆ. ಹಣದಿಂದ ಹೋದ ಜೀವ ಮರಳಿ ತಂದು ಕೊಡೋಕೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more