ಹಾಸನಾಂಬ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಪೂಜೆ: ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಸ್ವರೂಪ್‌

ಹಾಸನಾಂಬ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಪೂಜೆ: ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಸ್ವರೂಪ್‌

Published : Nov 04, 2023, 08:40 PM IST

ಹಾಸನಾಂಬ ದೇವರ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಸಮೇತ ಪೂಜೆಯಲ್ಲಿ ಭಾಗಿಯಾಗಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ.

ಹಾಸನ (ನ.04): ಹಾಸನಾಂಬ ದೇವಿಯ ಉತ್ಸವ ಹಾಗೂ ಕಳಸ ಪ್ರತಿಷ್ಠಾಪನೆಯಲ್ಲಿ ಹಾಸನದ ಶಾಸಕ ಸ್ವರೂಪ್‌ ಪ್ರಕಾಶ್‌ ಅವರು ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಜಿಲ್ಲಾಧಿಕಾರಿನೇ ಅಧ್ಯಕ್ಷೆ, ಉಪಾಧ್ಯಕ್ಷರೂ ಆಗಿಬಿಟ್ಟಿದ್ದಾರೆ. ಹಾಸನಾಂಬ ದೇವರ ಪೂಜೆಯಲ್ಲಿ ದಂಪತಿಯಿಂದಿಗೆ ಪೂಜೆಯಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿ ಮನಸೋಯಿಚ್ಛೆ ನಡೆದುಕೊಳ್ಳುತ್ತಿದ್ದಾರೆ. ಶಾಸಕರು, ನಗರಸಭೆ ಸದಸ್ಯರು ಹಾಗೂ ಇತರೆ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಹೇಳಿದರು. 

ಕುಟುಂಬ ಸಮೇತ ಪೂಜೆಗೆ ಕುಳಿತುಕೊಂಡು ದೇವರಿಗೆ ಅಗೌರವ ತೋರಿದ್ದಾರೆ. ಮುಂದಿನ ಅಧಿವೇಶನದಲ್ಲಿ ಮುಜರಾಯಿ ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿ ಸತ್ಯಭಾಮಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ. ಸನ್ಮಾನ ಆಗುವಂತಹ ಸಮಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಕೂಡ ಕಡೆಗಣಿಸಿದ್ದಾರೆ. ಇಂದು ಶನಿವಾರ ರಜಾದಿನವಾದ್ದರಿಂದ ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಾದಿಗಳು ಹಾಸನಾಂಬ ದರ್ಶನಕ್ಕೆ ಬರಬೇಕಿತ್ತು. ಆದರೆ, ಜಿಲ್ಲಾಧಿಕಾರಿಯ ಸರ್ವಾಧಿಕಾರಿ ಧೋರಣೆಯಿಂದ ಜನರು ಬೇಸತ್ತಿದ್ದಾರೆ. ಸರಿಯಾದ ಸಮಯಕ್ಕೆ ದರ್ಶನ ಸಿಗದೇ ದೇವರ ದರ್ಶನಕ್ಕೆ ಬರುವುದರ ಬಗ್ಗೆ ತಾತ್ಸಾರ ಮನೋಭಾವನೆ ತೋರುತ್ತಿದ್ದಾರೆ ಎಂದು ಶಾಸಕ ಸ್ವರೂಪ್‌ ಆಕ್ರೋಶ ವ್ಯಕ್ತಪಡಿಸಿದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more