ಹಾಸನಾಂಬ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಪೂಜೆ: ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಸ್ವರೂಪ್‌

ಹಾಸನಾಂಬ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಪೂಜೆ: ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಸ್ವರೂಪ್‌

Published : Nov 04, 2023, 08:40 PM IST

ಹಾಸನಾಂಬ ದೇವರ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಸಮೇತ ಪೂಜೆಯಲ್ಲಿ ಭಾಗಿಯಾಗಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ.

ಹಾಸನ (ನ.04): ಹಾಸನಾಂಬ ದೇವಿಯ ಉತ್ಸವ ಹಾಗೂ ಕಳಸ ಪ್ರತಿಷ್ಠಾಪನೆಯಲ್ಲಿ ಹಾಸನದ ಶಾಸಕ ಸ್ವರೂಪ್‌ ಪ್ರಕಾಶ್‌ ಅವರು ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಜಿಲ್ಲಾಧಿಕಾರಿನೇ ಅಧ್ಯಕ್ಷೆ, ಉಪಾಧ್ಯಕ್ಷರೂ ಆಗಿಬಿಟ್ಟಿದ್ದಾರೆ. ಹಾಸನಾಂಬ ದೇವರ ಪೂಜೆಯಲ್ಲಿ ದಂಪತಿಯಿಂದಿಗೆ ಪೂಜೆಯಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿ ಮನಸೋಯಿಚ್ಛೆ ನಡೆದುಕೊಳ್ಳುತ್ತಿದ್ದಾರೆ. ಶಾಸಕರು, ನಗರಸಭೆ ಸದಸ್ಯರು ಹಾಗೂ ಇತರೆ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಹೇಳಿದರು. 

ಕುಟುಂಬ ಸಮೇತ ಪೂಜೆಗೆ ಕುಳಿತುಕೊಂಡು ದೇವರಿಗೆ ಅಗೌರವ ತೋರಿದ್ದಾರೆ. ಮುಂದಿನ ಅಧಿವೇಶನದಲ್ಲಿ ಮುಜರಾಯಿ ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿ ಸತ್ಯಭಾಮಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ. ಸನ್ಮಾನ ಆಗುವಂತಹ ಸಮಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಕೂಡ ಕಡೆಗಣಿಸಿದ್ದಾರೆ. ಇಂದು ಶನಿವಾರ ರಜಾದಿನವಾದ್ದರಿಂದ ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಾದಿಗಳು ಹಾಸನಾಂಬ ದರ್ಶನಕ್ಕೆ ಬರಬೇಕಿತ್ತು. ಆದರೆ, ಜಿಲ್ಲಾಧಿಕಾರಿಯ ಸರ್ವಾಧಿಕಾರಿ ಧೋರಣೆಯಿಂದ ಜನರು ಬೇಸತ್ತಿದ್ದಾರೆ. ಸರಿಯಾದ ಸಮಯಕ್ಕೆ ದರ್ಶನ ಸಿಗದೇ ದೇವರ ದರ್ಶನಕ್ಕೆ ಬರುವುದರ ಬಗ್ಗೆ ತಾತ್ಸಾರ ಮನೋಭಾವನೆ ತೋರುತ್ತಿದ್ದಾರೆ ಎಂದು ಶಾಸಕ ಸ್ವರೂಪ್‌ ಆಕ್ರೋಶ ವ್ಯಕ್ತಪಡಿಸಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more