ಹಾಸನಾಂಬ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಪೂಜೆ: ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಸ್ವರೂಪ್‌

ಹಾಸನಾಂಬ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಪೂಜೆ: ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಸ್ವರೂಪ್‌

Published : Nov 04, 2023, 08:40 PM IST

ಹಾಸನಾಂಬ ದೇವರ ಉತ್ಸವದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ ದಂಪತಿ ಸಮೇತ ಪೂಜೆಯಲ್ಲಿ ಭಾಗಿಯಾಗಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ.

ಹಾಸನ (ನ.04): ಹಾಸನಾಂಬ ದೇವಿಯ ಉತ್ಸವ ಹಾಗೂ ಕಳಸ ಪ್ರತಿಷ್ಠಾಪನೆಯಲ್ಲಿ ಹಾಸನದ ಶಾಸಕ ಸ್ವರೂಪ್‌ ಪ್ರಕಾಶ್‌ ಅವರು ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಜಿಲ್ಲಾಧಿಕಾರಿನೇ ಅಧ್ಯಕ್ಷೆ, ಉಪಾಧ್ಯಕ್ಷರೂ ಆಗಿಬಿಟ್ಟಿದ್ದಾರೆ. ಹಾಸನಾಂಬ ದೇವರ ಪೂಜೆಯಲ್ಲಿ ದಂಪತಿಯಿಂದಿಗೆ ಪೂಜೆಯಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿ ಮನಸೋಯಿಚ್ಛೆ ನಡೆದುಕೊಳ್ಳುತ್ತಿದ್ದಾರೆ. ಶಾಸಕರು, ನಗರಸಭೆ ಸದಸ್ಯರು ಹಾಗೂ ಇತರೆ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಹೇಳಿದರು. 

ಕುಟುಂಬ ಸಮೇತ ಪೂಜೆಗೆ ಕುಳಿತುಕೊಂಡು ದೇವರಿಗೆ ಅಗೌರವ ತೋರಿದ್ದಾರೆ. ಮುಂದಿನ ಅಧಿವೇಶನದಲ್ಲಿ ಮುಜರಾಯಿ ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿ ಸತ್ಯಭಾಮಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ. ಸನ್ಮಾನ ಆಗುವಂತಹ ಸಮಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಕೂಡ ಕಡೆಗಣಿಸಿದ್ದಾರೆ. ಇಂದು ಶನಿವಾರ ರಜಾದಿನವಾದ್ದರಿಂದ ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಾದಿಗಳು ಹಾಸನಾಂಬ ದರ್ಶನಕ್ಕೆ ಬರಬೇಕಿತ್ತು. ಆದರೆ, ಜಿಲ್ಲಾಧಿಕಾರಿಯ ಸರ್ವಾಧಿಕಾರಿ ಧೋರಣೆಯಿಂದ ಜನರು ಬೇಸತ್ತಿದ್ದಾರೆ. ಸರಿಯಾದ ಸಮಯಕ್ಕೆ ದರ್ಶನ ಸಿಗದೇ ದೇವರ ದರ್ಶನಕ್ಕೆ ಬರುವುದರ ಬಗ್ಗೆ ತಾತ್ಸಾರ ಮನೋಭಾವನೆ ತೋರುತ್ತಿದ್ದಾರೆ ಎಂದು ಶಾಸಕ ಸ್ವರೂಪ್‌ ಆಕ್ರೋಶ ವ್ಯಕ್ತಪಡಿಸಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more